ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಗುಜರಾತ್ ರಾಜ್ಯದಲ್ಲಿ ವಿಕಾಸಕ್ಕೆ ಹುಚ್ಚು ಹಿಡಿದಿದೆ: ರಾಹುಲ್ ಗಾಂಧಿ

ಗುಜರಾತ್ ರಾಜ್ಯದಲ್ಲಿ ವಿಕಾಸಕ್ಕೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ...

ಬನಸ್ಕಾಂತಾ: ಗುಜರಾತ್ ರಾಜ್ಯದಲ್ಲಿ ವಿಕಾಸಕ್ಕೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. 
ಗುಜರಾತ್ ರಾಜ್ಯದ ಬನಸ್ಕಾಂತಾದಲ್ಲಿರುವ ಪಕ್ಷದ ಸಾಮಾಜಿದ ಜಾಲತಾಣದ ಸ್ವಯಂ ಸೇವಕರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದಲ್ಲಿದ್ದಾಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಕಚೇರಿಗೆ ಅಗೌರವವನ್ನು ತೋರಿಸಿದ್ದರು. ಆದರೆ, ಕಾಂಗ್ರೆಸ್ ಎಂದಿಗೂ ಆ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. 
ಮೋದಿಯವರ ತಪ್ಪುಗಳ ಕುರಿತಂತೆ ಅವರನ್ನು ಗುರಿಯಾಗಿರಿಸರಬಹುದು, ಬಿಜೆಪಿಗೆ ಸಮಸ್ಯೆಯನ್ನು ಮಾಡಿರಬಹುದು ಅದರೆ, ಎಂದಿಗೂ ಪ್ರಧಾನಮಂತ್ರಿಗಳ ಕಚೇರಿಗೆ ಅಗೌರವವನ್ನು ತೋರಿಲ್ಲ. ಮೋದಿಯವರು ವಿರೋಧ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಬಗ್ಗೆ ಅಗೌರವ ರೀತಿಯಲ್ಲಿ ಮಾತನಾಡಿದ್ದರು. ಅವರಿಗೂ ನಮಗೂ ಇರುವ ವ್ಯತ್ಯಾಸವೆಂದರೆ ಇದೇ ಎಂದು ತಿಳಿಸಿದ್ದಾರೆ. 
ಮೋದಿಯವರು ನಮ್ಮ ಬಗ್ಗೆ ಏನು ಹೇಳುತ್ತಾರೋ ಅದು ಮುಖ್ಯಮವಲ್ಲ. ನಾನು ಸತ್ಯವನ್ನಷ್ಟೇ ಹೇಳುತ್ತೇವೆ. ಗುಜರಾತ್ ರಾಜ್ಯದಲ್ಲಿ ವಿಕಾಸಕ್ಕೆ ಹುಚ್ಚು ಹಿಡಿದಿದೆ. ಬಿಜೆಪಿ ಹಾಗೂ ಕೇಂದ್ರ ಸರ್ಕಾರ ತಮ್ಮ ತಪ್ಪುಗಳನ್ನು ಎಂದಿಗೂ ಆತ್ಮಾವಲೋಕನ ಮಾಡಿಕೊಂಡಿಲ್ಲ. ಕಾಂಗ್ರೆಸ್ ಪಕ್ಷದ ಪ್ರಮುಖ ಸಿದ್ಧಾಂತವೇ ಸ್ವಯಂ ಆತ್ಮಾವಲೋಕನ ಮಾಡಿಕೊಳ್ಳುವುದು. ನಾವು ಯಾವುದೇ ತಪ್ಪು ಮಾಡಿದ್ದರೂ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ, ಮೋದಿಯವರು ಎಂದಿಗೂ ಸರಕು ಮತ್ತು ಸೇವಾ ತೆರಿಗೆ, ನೋಟು ನಿಷೇಧ ಕುರಿತು ತಮ್ಮ ತಪ್ಪನ್ನು ಎಂದಿಗೂ ಒಪ್ಪಿಕೊಂಡಿಲ್ಲ. 
ಗುಜರಾತ್ ರಾಜ್ಯದಲ್ಲಿ ಬಿಜೆಪಿ ಸುಳ್ಳು ರಾಜಕೀಯವನ್ನು ಮಾಡುತ್ತಿದೆ. ದೇಶದಲ್ಲಿ ಕೆಲ ತಪ್ಪುಗಳಾಗುತ್ತಿರುವುದನ್ನು ನಾವು ಒಪ್ಪಿಕೊಳ್ಳುತ್ತೇವೆ. ದೇಶದಲ್ಲಿ ಸಾಕಷ್ಟು ಶಕ್ತಿಯಿರುವುದೂ ನಮಗೆ ಗೊತ್ತಿದೆ. ನಮ್ಮ ದೇಶದ ದೊಡ್ಡ ಶಕ್ತಿಯಿಂದರೆ ಸತ್ಯವನ್ನು ಒಪ್ಪಿಕೊಳ್ಳುವುದು. ಕಾಂಗ್ರೆಸ್ ಪಕ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಸತ್ಯದ ಪರವಾಗಿ ಗೆಲವು ಸಾಧಿಸಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT