ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ 
ದೇಶ

ವಿಕಾಸಕ್ಕಲ್ಲ, ಕಾಂಗ್ರೆಸ್'ಗೆ ಹುಚ್ಚು ಹಿಡಿದಿದೆ: ರಾಹುಲ್ ವಿರುದ್ಧ ಜವಡೇಕರ್ ಕಿಡಿ

ಗುಜರಾತ್'ನಲ್ಲಿ ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಭಾನುವಾರ ಹೇಳಿದ್ದಾರೆ...

ಅಹಮದಾಬಾದ್: ಗುಜರಾತ್'ನಲ್ಲಿ ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಭಾನುವಾರ ಹೇಳಿದ್ದಾರೆ. 
ಈ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿಯವರು ಕಿಡಿಕಾರಿದ್ದರು. ಗುಜರಾತ್ ನಲ್ಲಿ ವಿಕಾಸಕ್ಕೆ ಏನಾಗಿದೆ? ವಿಕಾಸಕ್ಕೆ ಹುಚ್ಚು ಹಿಡಿದಿದೆ...? ಸುಳ್ಳುಗಳನ್ನು ಕೇಳಿ ಕೇಳಿ ವಿಕಾಸಕ್ಕೆ ಹುಚ್ಚು ಹಿಡಿದಿದೆ ಎಂದು ಟೀಕಿಸಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು, ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಗೆ ಹುಚ್ಚು ಹಿಡಿದಿದೆ. ಕಾಂಗ್ರೆಸ್ ದಾರಿ ತಪ್ಪಿದೆ. ವಿಕಾಸ ಎಲ್ಲಿರಬೇಕು ಅಲ್ಲಿಯೇ ಇದೆ ಎಂದು ಟಾಂಗ್ ನೀಡಿದ್ದಾರೆ. 
ಗುಡರಾತ್ ರಾಜ್ಯದಲ್ಲಿ ಡಿಸೆಂಬರ್ 9 ಹಾಗೂ 14 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು. ಡಿಸೆಂಬರ್ 18 ರಂದು ಮತ ಎಣಿಕೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!

ಸ್ವಂತ ವರ್ಚಸ್ಸಿನಿಂದ ಗೆದ್ದಿದ್ದೇವೆಂದು ಬೀಗುವವರು, ನೆಹರೂ ಕುಟುಂಬದ ಕುಡಿಯ ಎದುರು ಕೈ ಕಟ್ಟಿ ನಿಂತಿದ್ದಾರೆ..!

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!