ಸಂಗ್ರಹ ಚಿತ್ರ 
ದೇಶ

ಗುಜರಾತ್ ಚುನಾವಣೆಯಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಜಿಎಸ್ ಟಿ ಕಡಿತ: ಬಿಜೆಪಿ ವಿರುದ್ಧ ಶಿವಸೇನೆ ಕಿಡಿ

ಗುಜರಾತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಕೇಂದ್ರ ಸರ್ಕಾರ ಜಿಎಸ್ ಟಿ ಕಡಿತಗೊಳಿಸಿದೆ ಎಂದು ಶಿವಸೇನೆ ಆರೋಪಿಸಿದೆ.

ಮುಂಬೈ: ಗುಜರಾತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಕೇಂದ್ರ ಸರ್ಕಾರ ಜಿಎಸ್ ಟಿ ಕಡಿತಗೊಳಿಸಿದೆ ಎಂದು ಶಿವಸೇನೆ ಆರೋಪಿಸಿದೆ.
ಅಗತ್ಯ ವಸ್ತುಗಳನ್ನೂ ಶೇ.28ರಷ್ಟರ ತೆರಿಗೆ ವ್ಯಾಪ್ತಿಗೆ ಸೇರಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಪ್ರಜೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಗುಜರಾತ್ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ 211 ವಸ್ತುಗಳ  ತೆರಿಗೆಯನ್ನು ಕಡಿತಗೊಳಿಸಿ ಜನರ ಕಣ್ಣೊರೆಸುವ ನಾಟಕ ಮಾಡುತ್ತಿದೆ. ಇದು ಕೇವಲ ಬಿಜೆಪಿ ಪಕ್ಷದ ರಾಜಕೀಯ ನಾಟಕವಷ್ಟೇ ಎಂದು ಶಿವಸೇನೆ ಕಿಡಿಕಾರಿದೆ.
ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಕಿಡಿಕಾರುವ ಶಿವಸೇನೆ, ಈ ಹಿಂದೆ ವ್ಯಾಪಕ ಪ್ರತಿಭಟನೆಗಳ ಹೊರತಾಗಿಯೂ ಯಾವುದೇ ಕಾರಣಕ್ಕೂ ಜಿಎಸ್ ಟಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಸಿದ್ದ ಕೇಂದ್ರ ಸರ್ಕಾರ  ಇದೀಗ ದಿಢೀರನೇ ಏಕೆ ತೆರಿಗೆ ಕಡಿತಗೊಳಿಸಿದೆ. ಗುಜರಾತ್ ನಲ್ಲಿ ಬಿಜೆಪಿ ಶಾಸಕರು ಗ್ರಾಮಗಳನ್ನು ಇತರೆ ಪಕ್ಷದವರು ಪ್ರವೇಶಿಸಲು ಬಿಡುತ್ತಿಲ್ಲ. ಗುಡರಾತ್ ಚುನಾವಣೆಯಲ್ಲಿ ವ್ಯಾಪಕ ಪ್ರಮಾಣದ ಕಪ್ಪು ಹಣ ಹರಿಯುವ ಶಂಕೆ  ವ್ಯಕ್ತವಾಗುತ್ತಿದೆ. ಅವೈಜ್ಞಾನಿಕ ಜಿಎಸ್ ಟಿ ಜಾರಿಯಿಂದಾಗಿ ಕೇಂದ್ರ ಸರ್ಕಾರ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಬೆನ್ನೆಲುಬನ್ನೇ ಮುರಿದಿದ್ದು, ಹಣದುಬ್ಬರ ಪ್ರಮಾಣವನ್ನು ಏರಿಕೆ ಮಾಡಿದೆ. 
ಜನಸಾಮಾನ್ಯರ ಆರ್ಥಿಕ ಯೋಜನೆಗಳನ್ನೇ ಬುಡಮೇಲು ಮಾಡಿದ್ದು, ಅವರ ಭವಿಷ್ಯದ ಯೋಜನೆಗಳಿಗೆ ಕಲ್ಲು ಹಾಕಿದೆ. ಇದನ್ನು ಪ್ರತಿಭಟಿಸಲು ಮುಂದಾದ ಸಣ್ಣ ಸಣ್ಣ ಉಧ್ಯಮಿಗಳನ್ನು ಪೊಲೀಸರನ್ನು ಛೂಬಿಟ್ಟು ಥಳಿಸಲಾಗಿದೆ. ಈ  ಲಾಠಿ ಏಟನ್ನು ಜನ ಮರೆಯುವುದಿಲ್ಲ. ಖಂಡಿತಾ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ತಿರುಗೇಟು ನೀಡುತ್ತಾರೆ ಎಂದು ಸಾಮ್ನಾದಲ್ಲಿ ಶಿವಸೇನೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT