ದೆಹಲಿಯ ಶಾಂತಿವನದಲ್ಲಿ ಗೌರವ ನಮನ ಸಲ್ಲಿಸಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ಇಂದು ಪಂಡಿತ್ ನೆಹರೂ ಜನ್ಮ ದಿನಾಚರಣೆ: ಗೌರವ ನಮನ ಸಲ್ಲಿಸಿದ ರಾಷ್ಟ್ರ ನಾಯಕರು

ಭಾರತದ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಅವರ 128ನೇ ಜನ್ಮ ದಿನಾಚರಣೆ....

ನವದೆಹಲಿ: ಭಾರತದ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಅವರ 128ನೇ ಜನ್ಮ ದಿನಾಚರಣೆ ಇಂದು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೆಹರೂ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪಂಡಿತ್ ಜವಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇಂದು ಬೆಳಗ್ಗೆ ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕ ಬಳಿ ತೆರಳಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗೌರವ ನಮನ ಸಲ್ಲಿಸಿದರು. ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕೂಡ ಮೊದಲ ಪ್ರಧಾನಿಗೆ ನಮನ ಸಲ್ಲಿಸಿದ್ದಾರೆ. 
ಪಂಡಿತ್ ನೆಹರೂ ಅವರು ಭಾರತದ ಮೊದಲ ಪ್ರಧಾನ ಮಂತ್ರಿಯಾಗಿ 1947, ಆಗಸ್ಟ್ 15ರಂದು ಅಧಿಕಾರ ವಹಿಸಿಕೊಂಡರು. ಭಾರತ ಅದಾಗ ತಾನೇ ಬ್ರಿಟಿಷರಿಂದ ಸ್ವಾತಂತ್ರ್ಯ ಗಳಿಸಿತ್ತು.
ಅವರು ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನವೆಂಬರ್ 14, 1889ರಲ್ಲಿ ಜನಿಸಿ ಮೇ 27, 1964ರಲ್ಲಿ ನಿಧನರಾದರು.
ನೆಹರೂ ಅವರಿಗೆ ಮಕ್ಕಳ ಮೇಲೆ ಅಗಾಧ ಪ್ರೀತಿ ಇದ್ದದ್ದರಿಂದ ಅವರ ಜನ್ಮದಿನವನ್ನು ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. 
ಪಂಡಿತ್ ನೆಹರೂ ಅವರು 1919ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ್ನು ಸೇರಿದ್ದರು. ನಂತರ ಮಹಾತ್ಮಾ ಗಾಂಧಿಯವರೊಂದಿಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಧುಮುಕಿದರು. 1923ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೂಡ ಆಯ್ಕೆಯಾದರು.
ತಮ್ಮ ಸಾವಿನ ದಿನದವರೆಗೂ ಅಧಿಕಾರದಲ್ಲಿದ್ದ ನೆಹರೂ ಇದುವರೆಗೆ ಅತಿ ದೀರ್ಘಾವಧಿಯಲ್ಲಿದ್ದ ಪ್ರಧಾನ ಮಂತ್ರಿ ಎನಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT