ನರೇಂದ್ರ ಮೋದಿ 
ದೇಶ

ದಕ್ಷಿಣ ಚೀನಾ ಸಮುದ್ರ ವಿವಾದ: ನಿಯಮ ಆಧಾರಿತ ಭದ್ರತಾ ವ್ಯವಸ್ಥೆಗೆ ಭಾರತದ ಬೆಂಬಲ: ಮೋದಿ

ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟಕ್ಕಾಗಿ ಪ್ರಾದೇಶಿಕ ಸಹಕಾರವನ್ನು ತೀವ್ರಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್‌) ಸಭೆಯಲ್ಲಿ ಕರೆ ನೀಡಿದ್ದಾರೆ.

ಮನಿಲಾ: ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟಕ್ಕಾಗಿ ಪ್ರಾದೇಶಿಕ ಸಹಕಾರವನ್ನು ತೀವ್ರಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್‌) ಸಭೆಯಲ್ಲಿ ಕರೆ ನೀಡಿದ್ದಾರೆ. 
ಭಯೋತ್ಪಾದನೆ, ತೀವ್ರವಾದಿತ್ವ ಪ್ರಾದೇಶಿಕವಾಗಿ ಅತ್ಯಂತ ತುರ್ತಾಗಿ ನಿರ್ವಹಣೆ ಮಾಡಬೇಕಾದ ಸವಾಲುಗಳಾಗಿದ್ದು, ಎಲ್ಲಾ ರಾಷ್ಟ್ರಗಳೂ ಭಯೋತ್ಪಾದನೆಯ ವಿರುದ್ಧದ ಸಹಕಾರವನ್ನು ತೀವ್ರಗೊಳಿಸಬೇಕೆಂದು ಮೋದಿ ಹೇಳಿದ್ದಾರೆ. ಅಮೆರಿಕ, ಚೀನಾ, ಜಪಾನ್, ಆಸ್ಟ್ರೇಲಿಯಾ ರಾಷ್ಟ್ರಗಳು ಭಾಗಿಯಾಗಿದ್ದ ಇದೇ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಚೀನಾ ಸಮುದ್ರದ ವಿವಾದದ ಬಗ್ಗೆಯೂ ಮಾತನಾಡಿದ್ದು, ನಿಯಮ ಆಧಾರಿತ ಭದ್ರತಾ ವ್ಯವಸ್ಥೆಯನ್ನು ಭಾರತ ಬೆಂಬಲಿಸುತ್ತದೆ ಎಂದು ಆಸಿಯಾನ್ ರಾಷ್ಟ್ರಗಳ ಒಕ್ಕೂಟಕ್ಕೆ ಭರವಸೆ ನೀಡುವುದಾಗಿ ತಿಳಿಸಿದ್ದಾರೆ. 
ಆಸಿಯಾನ್ ಸಭೆಯಲ್ಲಿ ಚರ್ಚೆಗೆ ಬರುವ ವಿಷಯಗಳ ಪೈಕಿ ಚೀನಾದ ದಕ್ಷಿಣ ಸಮುದ್ರ ವಿವಾದದ ವಿಷಯ ಪ್ರಾಮುಖ್ಯತೆ ಪಡೆದಿತ್ತು. ದಕ್ಷಿಣ ಚೀನಾ ಸಮುದ್ರದ ಪ್ರದೇಶ ತಮಗೂ ಸೇರಿದೆ ಎಂದು ವಿಯೆಟ್ನಾಂ, ಫಿಲಿಪೇನ್ಸ್ ರಾಷ್ಟ್ರಗಳು ಹೇಳುತ್ತಿದ್ದು, ಚೀನಾ ದಕ್ಷಿಣ ಚೀನಾ ಸಮುದ್ರದಲ್ಲಿ ನಿಯಮ ಉಲ್ಲಂಘಿಸಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆರೋಪಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT