ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್: ಟಿಆರ್ಎಸ್ ನಾಯಕನ ಹತ್ಯೆ, ಸ್ವಪಕ್ಷೀಯರಿಂದಲೇ ಕೊಲೆ ಶಂಕೆ

ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಪಕ್ಷದ ನಾಯಕರೊಬ್ಬರನ್ನು ಗುರುವಾರ ಹೈದರಾಬಾದ್ ನಲ್ಲಿ ಹತ್ಯೆ....

ಹೈದರಾಬಾದ್: ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಪಕ್ಷದ ನಾಯಕರೊಬ್ಬರನ್ನು ಗುರುವಾರ ಹೈದರಾಬಾದ್ ನಲ್ಲಿ ಹತ್ಯೆ ಮಾಡಲಾಗಿದ್ದು, ಸ್ವಪಕ್ಷೀಯರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಆಂಧ್ರಪ್ರದೇಶ ಮೂಲದ ಟಿಆರ್ ಎಸ್ ನಾಯಕ ವಿ ಶ್ರೀನಿವಾಸ್ ರಾವ್(40) ಅವರ ಮೃತದೇಹ ಇಂದು ಸನಾತನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಪತ್ತೆಯಾಗಿದ್ದು, ಮರದ ಲಾಗ್ ನಿಂದ ಹೊಡೆದು ಬಳಿಕ ತಲೆಯನ್ನು ಕಲ್ಲಿನಿಂದ ಜಜ್ಜಿ ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹ ಪತ್ತೆಯಾದ ಸ್ಥಳದಲ್ಲಿ ನಾಲ್ಕು ಮದ್ಯದ ಬಾಟಲಿಗಳು ಸಿಕ್ಕಿದ್ದು, ಕೃತ್ಯಕ್ಕು ಮುನ್ನ ದುಷ್ಕರ್ಮಿಗಳು ಮೃತ ಶ್ರೀನಿವಾಸ್ ರಾವ್ ಜೊತೆ ಸೇರಿ ಮದ್ಯ ಸೇವಿಸಿರುವ ಸಾಧ್ಯತೆ ಇದೆ. ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಿಆರ್ ಎಸ್ ನಾಯಕರಾಗಿದ್ದ ರಾವ್ ಅವರು ಬಲ್ಕಮ್ ಪೇಟ್ ನಲ್ಲಿ ಶೈಕ್ಷಣಿಕ ಕನ್ಸಲ್ಟೆನ್ಸಿಯೊಂದನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಅವರಿಗೆ ಸ್ವಪಕ್ಷೀಯ ಕಾರ್ಯಕರ್ತರಿಂದಲೇ ಜೀವ ಬೆದರಿಕೆ ಇತ್ತು. ಅಲ್ಲದೆ ಒಂದು ಬಾರಿ ಶ್ರೀನಿವಾಸ್ ರಾವ್ ಮೇಲೆ ಟಿಆರ್ಎಸ್ ಕಾರ್ಯಕರ್ತರು ದಾಳಿ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

SCROLL FOR NEXT