ಶ್ರೀ ಶ್ರೀ ರವಿಶಂಕರ್ 
ದೇಶ

ಅಯೋಧ್ಯಾ ವಿವಾದ ಮಧ್ಯಸ್ಥಿಕೆಗೆ ಇದು ಸೂಕ್ತ ಸಮಯ: ಶ್ರೀ ಶ್ರೀ ರವಿಶಂಕರ್

ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರು ಗುರುವಾರ ರಾಮ ಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ಮಾತುಕತೆಗಳು ಆರಂಭಿಸಿದ್ದಾರೆ.

ಅಯೋಧ್ಯೆ : ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರು ಗುರುವಾರ ರಾಮ ಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ಮಾತುಕತೆಗಳು ಆರಂಭಿಸಿದ್ದಾರೆ, "ಒಂದು ನಿರ್ಧಾರಕ್ಕೆ ಬರಲು ಇದು ಒಳ್ಳೆಯ ಪ್ರಾರಂಭವಾಗಿದೆ" ಎಂದು ಅವರು ಹೇಳಿದ್ದಾರೆ.
"ಇದೀಗ ಕಾಲ ಸೂಕ್ತವಾಗಿದೆ, ಜನರು ಈ ಸಂಘರ್ಷದಿಂದ ಹೊರಬರಲು ಬಯಸುತ್ತಾರೆ,ಇದು ಅಷ್ಟೊಂದು ಸುಲಭವಲ್ಲವೆಂದು ನನಗೂ ತಿಳಿದಿದೆ, ನಾನು ಎಲ್ಲರೊಡನೆ ಮಾತಾಡುತ್ತೇನೆ" ಶ್ರೀ ಶ್ರೀ ರವಿಶಂಕರ್ ಮಾದ್ಯಮದೊಡನೆ ಮಾತನಾಡುತ್ತಾ ತಿಳಿಸಿದರು.
ಆರ್ಟ್ ಆಫ್ ಲಿವಿಂಗ್ ನ ಸ್ಥಾಪಕರು ಇಂದು ಅಯೋಧ್ಯೆಯನ್ನು ತಲುಪಿದ್ದಾರೆ.ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದದಲ್ಲಿ ಮಧ್ಯಸ್ಥಗಾರರೊಂದಿಗೆ ಮಾತುಕತೆಗಳನ್ನು ನಡೆಸುವುದಾಗಿ ಶ್ರೀ ಶ್ರೀ ರವಿಶಂಕರ್ ಅವರು ಘೋಷಿಸುವ ಮೂಲಕ ರಾಮ ಮಂದಿರ ವಿವಾದವು ಮತ್ತೆ ಮುನ್ನೆಲೆಗೆ ಬಂದಿದೆ. 
ಅವರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. "ನಾನು ಯಾವುದೇ ಅಜೆಂಡಾವನ್ನು ಹೊಂದಿಲ್ಲ ಮತ್ತು ಪ್ರತಿಯೊಬ್ಬರ ಮಾತುಗಳನ್ನು ಕೇಳುತ್ತೇನೆ" ಎಂದು ಅವರು ಹೇಳಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಸಹ ವಿವಾದಿತ ಸ್ಥಳಕ್ಕೆ ಭೇಟಿ ನೀಡಿದ್ದು,ಸುಪ್ರೀಂ ಕೋರ್ಟ್ ನಲ್ಲಿರುವ  ಕಾನೂನು ಪ್ರಕ್ರಿಯೆಯನ್ನು  ಮೊದಲು ಪೂರ್ಣಗೊಳಿಸಬೇಕು, ಆ ನಂತರ ಇತರೆ ಆಯ್ಕೆಗಲನ್ನು ಪರಿಶೀಲಿಸಬಹುದಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವಿಶಂಕರ್ ಅವರ ಮಧ್ಯಸ್ಥಿಕೆಯನ್ನು ಸ್ವಾಗತಿಸಿದ್ದಾರೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT