ಯೋಗಿ ಆದಿತ್ಯನಾಥ್ 
ದೇಶ

ಬೆದರಿಕೆ ಹಾಕುವುದು ತಪ್ಪು, ಭನ್ಸಾಲಿಯದ್ದೂ ಅಷ್ಟೇ ತಪ್ಪಿದೆ: ಯೋಗಿ ಆದಿತ್ಯನಾಥ್

ದೀಪಿಕಾ ಪಡುಕೋಣೆ ಅಭಿನಯದ ವಿವಾದಾತ್ಮಕ ಚಿತ್ರ 'ಪದ್ಮಾವತಿ' ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ....

ಲಖನೌ: ದೀಪಿಕಾ ಪಡುಕೋಣೆ ಅಭಿನಯದ ವಿವಾದಾತ್ಮಕ ಚಿತ್ರ 'ಪದ್ಮಾವತಿ' ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು,  ಚಿತ್ರದ ನಟಿಗೆ ಮತ್ತು ಇತರರಿಗೆ ಜೀವ ಬೆದರಿಕೆ ಹಾಕುವುದು ತಪ್ಪು ಮತ್ತು ಚಿತ್ರದ ನಿರ್ದೇಶಕರದ್ದೂ ಅಷ್ಟೇ ತಪ್ಪಿದೆ. ಹೀಗಾಗಿ ಇಬ್ಬರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಮಂಗಳವಾರ ಹೇಳಿದ್ದಾರೆ.
ಸಂಜಯ್ ಲೀಲಾ ಭನ್ಸಾಲಿ ಅವರು ಜನರ ಭಾವನೆಳೊಂದಿಗೆ ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ ಸಿಎಂ ಯೋಗಿ, ಚಿತ್ರದಲ್ಲಿನ ಕೆಲ ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕುವವರೆಗೆ ರಾಜ್ಯದಲ್ಲಿ ಚಿತ್ರ ಬಿಡುಗಡೆಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಸಂಜಯ್ ಲೀಲಾ ಭನ್ಸಾಲಿ ಆಗಲಿ ಅಥವಾ ಇನ್ಯಾರೇ ಆಗಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಚಿತ್ರದ ನಟಿ ದೀಪಿಕಾ ಪಡುಕೋಣೆ ಹಾಗೂ ಚಿತ್ರ ತಂಡದ ಇತರರಿಗೆ ಬೆದರಿಕೆ ಹಾಕುವವರಿಗಿಂತ ಸಂಜಯ್ ಲೀಲಾ ಭನ್ಸಾಲಿ ಕಮ್ಮಿ ಅಂತ ನನಗೆ ಅನಿಸುತ್ತಿಲ್ಲ. ಒಂದು ವೇಳೆ ಬೆದರಿಕೆ ಹಾಕುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದೇಯಾದರೆ ನಿರ್ದೇಶಕರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು. ಪ್ರತಿಯೊಬ್ಬರ ಭಾವನೆಗಳನ್ನು ಎಲ್ಲರೂ ಗೌರವಿಸಬೇಕು ಎಂದು ಉತ್ತರ ಪ್ರದೇಶ ಸಿಎಂ ಹೇಳಿದ್ದಾರೆ.
ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ಮತ್ತು ಶಾಹೀದ್‌ ಕಪೂರ್‌ ಅಭಿನಯದ 'ಪದ್ಮಾವತಿ' ಚಿತ್ರ ರಜಪೂತರ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದಲ್ಲಿ ರಾಣಿ ಪದ್ಮಿನಿಯ ಇತಿಹಾಸವನ್ನು ತಿರುಚಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಜಕೀಯ ರಂಗು ಪಡೆಯುತ್ತಿರುವ ಈ ಚಿತ್ರದ ವಿರುದ್ಧ ಪ್ರತಿಭಟನೆಗಳು ಶುರುವಾಗಿದ್ದು, ಪದ್ಮಾವತಿ ಬಿಡುಗಡೆ ದಿನಾಂಕವನ್ನೂ ಮುಂದೂಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT