ಆತ್ಮಹತ್ಯೆ 
ದೇಶ

ಚೆನ್ನೈ: ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆ; ಅಪ್ರಾಪ್ತ ಬಾಲಕ ಸಾವಿಗೆ ಶರಣು

ಬೈಕ್ ಕಳ್ಳತನ ಆರೋಪ ಸಂಬಂಧ 15 ವರ್ಷದ ಅಪ್ರಾಪ್ತ ಬಾಲಕನಿಗೆ ವಿಚಾರಣೆ ನೆಪದಲ್ಲಿ ಪೊಲೀಸರು ಚಿತ್ರಹಿಂಸೆ ನೀಡಿದ ಪರಿಣಾಮ ನೊಂದ ಬಾಲಕ ಸಂಬಂಧಿಕರ...

ಚೆನ್ನೈ: ಬೈಕ್ ಕಳ್ಳತನ ಆರೋಪ ಸಂಬಂಧ 15 ವರ್ಷದ ಅಪ್ರಾಪ್ತ ಬಾಲಕನಿಗೆ ವಿಚಾರಣೆ ನೆಪದಲ್ಲಿ ಪೊಲೀಸರು ಚಿತ್ರಹಿಂಸೆ ನೀಡಿದ ಪರಿಣಾಮ ನೊಂದ ಬಾಲಕ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 
ತಿರುವೇರ್ಕಾಡು ಠಾಣಾ ಪೊಲೀಸರು ಬೈಕ್ ಕಳ್ಳತನ ಸಂಬಂಧ ಬಾಲಕ ಸಿ ಡೇವಿಡ್ ಎಂಬಾತನನ್ನು ಠಾಣೆಗೆ ಕರೆತಂದು ಆರೋಪ ಒಪ್ಪಿಕೊಳ್ಳುವಂತೆ ಎರಡು ದಿನಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ. ಇದರಿಂದ ಬೇಸರಗೊಂಡ ಬಾಲಕ ಸಾವಿಗೆ ಶರಣಾಗಿದ್ದಾನೆ. 
ಈ ಸಂಬಂಧ ಪೊಲೀಸರು ಮೃತ ಬಾಲಕ ಪೋಷಕರು ತಮಗೆ ಕೆಟ್ಟ ಹೆಸರು ತಂದಿಟ್ಟೆ ಎಂದು ಬೈದಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳುತ್ತಿದ್ದಾರೆ. 
ಡೇವಿಡ್ ಮೂಲತಃ ಆಂಧ್ರಪ್ರದೇಶದವನಾಗಿದ್ದು ಮಧ್ಯದಲ್ಲೇ ಶಾಲೆಯನ್ನು ಬಿಟ್ಟಿದ್ದ. ಆತನ ತಂದೆ ತಾಯಿಗಳು ಅಯಕ್ಕಮ್ ಪಂಚಾಯತ್ ನಲ್ಲಿ ಕೆಲಸ ಮಾಡುತ್ತಿದ್ದು ಭಾನುವಾರ ಪೊಲೀಸರು ಡೇವಿಡ್ ನನ್ನು ಪೊಲೀಸ್ ಠಾಣೆಗೆ ಕರೆತಂದಿದ್ದರು. ಸೋಮವಾರ ಸಂಜೆ ಆತನನ್ನು ಹೋಗಲು ಸೂಚಿಸಿದ್ದರು. ಮಂಗಳವಾರ ಬೆಳಗ್ಗೆ ಪೋಷಕರು ಪೊಲೀಸ್ ಠಾಣೆಗೆ ತೆರಳಿದಾಗ ಆತನನ್ನು ನಿನ್ನೆ ಸಂಜೆ ಮನೆಗೆ ಕಳುಹಿಸಿರುವುದಾಗಿ ಹೇಳಿದ್ದಾರೆ. 
ಠಾಣೆಯಿಂದ ಹೊರಬಂದ ಡೇವಿಡ್ ಸಂಬಂಧಿಕರ ಮನೆಗೆ ತೆರಳಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನು ಕಂಡ ಆತನ ಪೋಷಕರು ಠಾಣೆಯಲ್ಲಿ ಪೊಲೀಸರು ನೀಡಿದ ಚಿತ್ರಹಿಂಸೆಯನ್ನು ತಾಳಲಾರದೆ ಮಗ ಆತ್ಮಹತ್ಯೆಗೆ ಶರಣಾಗಿರುವುದಾಗಿ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ