ಆತ್ಮಹತ್ಯೆ 
ದೇಶ

ಚೆನ್ನೈ: ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆ; ಅಪ್ರಾಪ್ತ ಬಾಲಕ ಸಾವಿಗೆ ಶರಣು

ಬೈಕ್ ಕಳ್ಳತನ ಆರೋಪ ಸಂಬಂಧ 15 ವರ್ಷದ ಅಪ್ರಾಪ್ತ ಬಾಲಕನಿಗೆ ವಿಚಾರಣೆ ನೆಪದಲ್ಲಿ ಪೊಲೀಸರು ಚಿತ್ರಹಿಂಸೆ ನೀಡಿದ ಪರಿಣಾಮ ನೊಂದ ಬಾಲಕ ಸಂಬಂಧಿಕರ...

ಚೆನ್ನೈ: ಬೈಕ್ ಕಳ್ಳತನ ಆರೋಪ ಸಂಬಂಧ 15 ವರ್ಷದ ಅಪ್ರಾಪ್ತ ಬಾಲಕನಿಗೆ ವಿಚಾರಣೆ ನೆಪದಲ್ಲಿ ಪೊಲೀಸರು ಚಿತ್ರಹಿಂಸೆ ನೀಡಿದ ಪರಿಣಾಮ ನೊಂದ ಬಾಲಕ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 
ತಿರುವೇರ್ಕಾಡು ಠಾಣಾ ಪೊಲೀಸರು ಬೈಕ್ ಕಳ್ಳತನ ಸಂಬಂಧ ಬಾಲಕ ಸಿ ಡೇವಿಡ್ ಎಂಬಾತನನ್ನು ಠಾಣೆಗೆ ಕರೆತಂದು ಆರೋಪ ಒಪ್ಪಿಕೊಳ್ಳುವಂತೆ ಎರಡು ದಿನಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ. ಇದರಿಂದ ಬೇಸರಗೊಂಡ ಬಾಲಕ ಸಾವಿಗೆ ಶರಣಾಗಿದ್ದಾನೆ. 
ಈ ಸಂಬಂಧ ಪೊಲೀಸರು ಮೃತ ಬಾಲಕ ಪೋಷಕರು ತಮಗೆ ಕೆಟ್ಟ ಹೆಸರು ತಂದಿಟ್ಟೆ ಎಂದು ಬೈದಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳುತ್ತಿದ್ದಾರೆ. 
ಡೇವಿಡ್ ಮೂಲತಃ ಆಂಧ್ರಪ್ರದೇಶದವನಾಗಿದ್ದು ಮಧ್ಯದಲ್ಲೇ ಶಾಲೆಯನ್ನು ಬಿಟ್ಟಿದ್ದ. ಆತನ ತಂದೆ ತಾಯಿಗಳು ಅಯಕ್ಕಮ್ ಪಂಚಾಯತ್ ನಲ್ಲಿ ಕೆಲಸ ಮಾಡುತ್ತಿದ್ದು ಭಾನುವಾರ ಪೊಲೀಸರು ಡೇವಿಡ್ ನನ್ನು ಪೊಲೀಸ್ ಠಾಣೆಗೆ ಕರೆತಂದಿದ್ದರು. ಸೋಮವಾರ ಸಂಜೆ ಆತನನ್ನು ಹೋಗಲು ಸೂಚಿಸಿದ್ದರು. ಮಂಗಳವಾರ ಬೆಳಗ್ಗೆ ಪೋಷಕರು ಪೊಲೀಸ್ ಠಾಣೆಗೆ ತೆರಳಿದಾಗ ಆತನನ್ನು ನಿನ್ನೆ ಸಂಜೆ ಮನೆಗೆ ಕಳುಹಿಸಿರುವುದಾಗಿ ಹೇಳಿದ್ದಾರೆ. 
ಠಾಣೆಯಿಂದ ಹೊರಬಂದ ಡೇವಿಡ್ ಸಂಬಂಧಿಕರ ಮನೆಗೆ ತೆರಳಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನು ಕಂಡ ಆತನ ಪೋಷಕರು ಠಾಣೆಯಲ್ಲಿ ಪೊಲೀಸರು ನೀಡಿದ ಚಿತ್ರಹಿಂಸೆಯನ್ನು ತಾಳಲಾರದೆ ಮಗ ಆತ್ಮಹತ್ಯೆಗೆ ಶರಣಾಗಿರುವುದಾಗಿ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT