ರಾಬ್ಡಿ ದೇವಿ 
ದೇಶ

ಮೋದಿ ಕುತ್ತಿಗೆ ಸೀಳಿ, ಕೈಗಳನ್ನು ಕತ್ತರಿಸಲು ಬಿಹಾರದ ಜನ ಸಿದ್ದರಿದ್ದಾರೆ: ರಾಬ್ಡಿ ದೇವಿ

ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​ ಪತ್ನಿ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಟ್ನಾ: ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​ ಪತ್ನಿ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಹಾರದ ಜನರು  ಪ್ರಧಾನಿ ನರೇಂದ್ರ ಮೋದಿ ಅವರ ಕತ್ತು ಸೀಳಲು, ಕೈಗಳನ್ನು ಕಡಿಯಲು ಸಿದ್ದರಿದ್ದಾರೆ ಎಂದಿದ್ದಾರೆ.
ನಿನ್ನೆ ಬಿಹಾರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ರಾಬ್ಡಿ ದೇವಿ ಈ ಹೇಳಿಕೆ ನೀಡಿದ್ದಾರೆ. ಬಿಹಾರದ ಬಿಜೆಪಿ ಪಕ್ಷದ ಅಧ್ಯಕ್ಷರಾದ ನಿತ್ಯಾನಂದ ರಾಯ್ 'ಪ್ರಧಾನಿ ಅವರ ವಿರುದ್ಧ ಕೈ ಎತ್ತುವವರ ಎಲ್ಲಾ ಕೈ ಬೆರಳನ್ನೂ ಕತ್ತರಿಸಬೇಕು' ಎಂದು ಇತ್ತೀಚೆಗೆ ಹೇಳಿಕೆಯೊಂದನ್ನು ನೀಡಿದ್ದರು
ಆ ನಂತರದಲ್ಲಿ ರಾಯ್ ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಯಾಚಿಸಿದ್ದರು. ಬಿಹಾರದ ಜನತೆಯ ಭಾವನೆಗೆ ಧಕ್ಕೆಯಾಗುವಂತಿದ್ದರೆ ನನ್ನ ಹೇಳಿಕೆಯ ಕುರಿತು ಕ್ಷಮೆಯಾಚಿಸುವೆ ಎಂದಿದ್ದ ಅವರ ಮಾತುಗಳಿಗೆ ತಿರುಗೇಟು ನೀಡುವಂತೆ ರಾಬ್ಡಿ ದೇವಿ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT