ಸಂಗ್ರಹ ಚಿತ್ರ 
ದೇಶ

ಕಲ್ಲು ತೂರಾಟಗಾರರಿಗೆ ಒಂದು ಬಾರಿ ಕ್ಷಮಾದಾನ: ಜಮ್ಮು-ಕಾಶ್ಮೀರ ಸರ್ಕಾರ ಫೋಷಣೆ!

ಕಣಿವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ ದೊಡ್ಡ ಸವಾಲಾಗಿದ್ದ ಕಲ್ಲು ತೂರಾಟಗಾರರ ಕುರಿತು ಸಿಎಂ ಮೆಹಬೂಬ ಮುಫ್ತಿ ಸರ್ಕಾರ ಮೃದು ಧೋರಣೆ ತಳೆದಂತಿದ್ದು, ಕಲ್ಲು ತೂರಾಟಗಾರರಿಗೆ ಕ್ಷಮಾದಾನ ನೀಡಿದೆ.

ಶ್ರೀನಗರ: ಕಣಿವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ ದೊಡ್ಡ ಸವಾಲಾಗಿದ್ದ ಕಲ್ಲು ತೂರಾಟಗಾರರ ಕುರಿತು ಸಿಎಂ ಮೆಹಬೂಬ ಮುಫ್ತಿ ಸರ್ಕಾರ ಮೃದು ಧೋರಣೆ ತಳೆದಂತಿದ್ದು, ಮೊದಲ ಬಾರಿಗೆ ಕಲ್ಲು ತೂರಾಟ ಮಾಡಿ ಸಿಕ್ಕಿ ಬೀಳುವ ಯುವಕರಿಗೆ ಕ್ಷಮಾದಾನ ನೀಡಿದೆ.
ಈ ಬಗ್ಗೆ ಸ್ವತಃ ಸಿಎಂ ಮುಫ್ತಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ಬದಲಾಗುತ್ತಾರೆ ಎನ್ನುವುದಾದರೆ ಕ್ಷಮೆ ನೀಡುವುದರಲ್ಲಿ ತಪ್ಪಿಲ್ಲ.. ಕ್ಷಮೆ ನೀಡುವುದರ ಮೂಲಕ ರಾಜ್ಯದಲ್ಲಿ ಶಾಂತಿಯ ಹೊಸ  ಅಧ್ಯಾಯ  ಆರಂಭಿಸುವುದರಲ್ಲಿ ನನಗೆ ತೃಪ್ತಿ ಇದೆ. ಮೊದಲ ಬಾರಿಗೆ ಕಲ್ಲು ತೂರಾಟ ಪ್ರಕರಣಗಳಲ್ಲಿ ಸಿಕ್ಕಿ ಬೀಳುವರರ ವಿರುದ್ಧ ಎಫ್ ಐಆರ್ ಗಳನ್ನು ರದ್ದು ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
2016ರ ಮೇ ತಿಂಗಳಿನಿಂದ ಕಾಶ್ಮೀರದಲ್ಲಿ ಉಂಟಾಗಿದ್ದ ಸಂಘರ್ಷ ಪರಿಸ್ಥಿತಿಯನ್ನು ತನ್ನ ಸರ್ಕಾರ ನಿಯಂತ್ರಣಕ್ಕೆ ತಂದಿದೆ. ಕಲ್ಲು ತೂರಾಟ ಮತ್ತು ಹಿಂಸಾಚಾರದ ಮೂಲಕ ಕುಟುಂಬಗಳಿಂದ ದೂರ ಉಳಿದಿದ್ದ ಯುವಕರು  ಇನ್ನಾದರೂ ಸಮಾಜ ವಿದ್ರೋಹಿ ಕಾರ್ಯಗಳಿಂದ ದೂರಉಳಿದು, ಕುಟುಂಬದೊಂದಿಗೆ ಹೊಸ ಬಾಂಧವ್ಯ ನಿರ್ಮಾಣ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಕಾಶ್ಮೀರ ಸಂಘರ್ಷ ಹಾಗೂ ವಿವಾದ ಸಂಬಂಧ ಕೇಂದ್ರ ಸರ್ಕಾರ ದಿನೇಶ್ವರ ಶರ್ಮಾ ಅವರನ್ನು ಮಧ್ಯವರ್ತಿಯನ್ನಾಗಿ ನೇಮಿಸಿತ್ತು. ಅವರ ಸಲಹೆ ಮೇರೆಗೆ ಇದೀಗ ಸುಮಾರು 4500 ಕಲ್ಲು ತೂರಾಟಗಾರರ ಮೇಲಿನ ಪ್ರಕರಣಗಳನ್ನು  ಕೈ ಬಿಡಲಾಗಿದೆ ಎಂದು ಹೇಳಲಾಗಿದೆ. 
ಕಳೆದ ವಾರವಷ್ಟೇ ಸ್ನೇಹಿತನ ಸಾವಿನ ಬಳಿಕ ಲಷ್ಕರ್ ಸಂಘಟನೆ ಸೇರಿದ್ದ ಉಗ್ರನೋರ್ವ ತಾಯಿಯ ಕಣ್ಣೀರಿಗೆ ಕರಗಿ ಪೊಲೀಸರಿಗೆ ಶರಣಾಗಿದ್ದ ಘಟನೆಯನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT