ಎಪಿ ಶಾ 
ದೇಶ

ಸೊಹ್ರಾಬುದ್ದೀನ್ ಎನ್ ಕೌಂಟರ್: ನ್ಯಾಯಮೂರ್ತಿಗಳ ಅನುಮಾನಾಸ್ಪದ ಸಾವಿನ ತನಿಖೆಯಾಗಲಿ

ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿಚಾರಣೆ ನಡೆಸುತ್ತಿದ್ದ ವಿಶೇಷ ಸಿಬಿಐ ನ್ಯಾಯಾಧೀಶ ಬ್ರಿಜ್ಗೋಪಾಲ್ ಹರಿಕೃಶನ್ ಲೋಯಾ ಅವರ ಸಾವಿನ ಬಗ್ಗೆ ........

ನವದೆಹಲಿ: ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿಚಾರಣೆ ನಡೆಸುತ್ತಿದ್ದ ವಿಶೇಷ ಸಿಬಿಐ ನ್ಯಾಯಾಧೀಶ ಬ್ರಿಜ್ಗೋಪಾಲ್ ಹರಿಕೃಶನ್ ಲೋಯಾ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ದೆಹಲಿ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ.ಶಾ ಹೇಳಿದ್ದಾರೆ. ಎನ್ ಡಿ ಟಿವಿ ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಹೇಳಿಕೆ ನೀಡಿದ್ದು  "ಅವನ ಸಾವಿನ ಕುರಿತು ಕೆಲವು ಅನುಮಾನಗಳಿವೆ ಎಂದು ಅವರ ಕುಟುಂಬ ಬಹಳ ಬಲವಾಗಿ ಹೇಳುತ್ತಿದೆ" ಎಂದಿದ್ದಾರೆ.
ಅವರ ಉಡುಪುಗಳ ಮೇಲೆ ರಕ್ತವಿತ್ತು ಎಂದು ಹೇಳಲಾಗಿರುವುದಲ್ಲದೆ ಮರಣೋತ್ತರ ಪರೀಕ್ಷಾ ವರದಿಗೆ ಯಾರೋ ವ್ಯಕ್ತಿ ಸಹಿ ಮಾಡಿದ್ದಾರೆ. ಹೀಗಾಗಿ ಅವರ ಕುಟುಂಬ ಅವರು ಹೃದಯಾಘಾತವಾಗಿ ಸತ್ತರು ಎನ್ನುವುದನ್ನು ನಂಬುತ್ತಿಲ್ಲ. "ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶ ಅಥವಾ ಭಾರತದ ಮುಖ್ಯ ನ್ಯಾಯಮೂರ್ತಿಯು ಸ್ವತಃ ಈ ಪ್ರಕರಣದ ಕುರಿತು ಗಮನ ಹರಿಸಿ ನೋಡಬೇಕು ಮತ್ತು ವಿಚಾರಣೆಗೆ ಆದೇಶ ಮಾಡಬೇಕೆ ಎನ್ನುವುದನ್ನು ನಿರ್ಧರಿಸಬೇಕು.  ಈ ಆರೋಪಗಳನ್ನು ತನಿಖೆ ಮಾಡದಿದ್ದರೆ ಅದರಿಂದ ನ್ಯಾಯಾಂಗಕ್ಕೆ ಗಂಭೀರ ಕಳಂಕ ತಗಲುತ್ತದೆ" ಎಂದು ಶಾ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ  ನ್ಯಾಯಾಂಗದ ಸಮಗ್ರತೆಯ ಕುರಿತಂತೆ ಜನರ ವಿಶ್ವಾಸವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು  ಅವರು ಒತ್ತಿ ಹೇಳಿದರು.
ಪ್ರಸಿದ್ದ ವಾರ್ತಾ ನಿಯತಕಾಲಿಕೆ ಕ್ಯಾರವಾನ್ ವರದಿಯನ್ನು ಉದಾಹರಿಸಿ ಮಾತನಾಡಿದ ನ್ಯಾಯಮೂರ್ತಿ ಶಾ,  ನ್ಯಾಯಮೂರ್ತಿ ಬಿ.ಎಚ್.ಲೋಯಾ ಅವರ ಕುಟುಂಬವು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ, ಇದಕ್ಕಾಗಿ ಅವರ ಸಾವಿಗೆ ಏನು ಕಾರಣ ಎನ್ನುವುದು ತನಿಖೆಯಾಗಬೇಕಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT