ನಹಾರ್ಗಡ್ ಕೋಟೆ 
ದೇಶ

ಜೈಪುರದ ಕೋಟೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ; ಪದ್ಮಾವತಿ ಚಿತ್ರ ವಿರೋಧಿಸಿ ಬೆದರಿಕೆ ಪತ್ರ!

ಪದ್ಮಾವತಿ ಚಿತ್ರದ ವಿರುದ್ಧ ರಜಪೂತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಚಿತ್ರವನ್ನು ವಿರೋಧಿಸಿ ಬೆದರಿಕೆ ಪತ್ರ ಹೊಂದಿರುವ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಜೈಪುರದ ನಹಾರ್ಗಡ್...

ಜೈಪುರ: ಪದ್ಮಾವತಿ ಚಿತ್ರದ ವಿರುದ್ಧ ರಜಪೂತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಜೈಪುರದ ನಹಾರ್ಗಡ್ ಕೋಟೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಶವದ ಬಳಿ ಚಿತ್ರವನ್ನು ವಿರೋಧಿಸಿ ಬೆದರಿಕೆ ಪತ್ರ ಸಿಕ್ಕಿದೆ.
ಕೋಟೆಯ ಕಲ್ಲಿನ ಮೇಲೂ ಸಹ ಚಿತ್ರವನ್ನು ವಿರೋಧಿಸಿ ಬರೆಯಲಾಗಿದ್ದು, ನಾವು ಕೇವಲ ಪ್ರತಿಕೃತಿಗಳನ್ನಷ್ಟೇ ದಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಲಾಗಿದೆ. ಪದ್ಮಾವತಿ ಚಿತ್ರಕ್ಕೆ ವಿರೋಧ, ನಾವು ಕೇವಲ ಪ್ರತಿಕೃತಿಗಳನ್ನಷ್ಟೇ ದಹಿಸುವುದಿಲ್ಲ, ನಾವು ಸಾಯಿಸುತ್ತೇವೆ ಎಂಬ ಸಂದೇಶ ನೇಣು ಬಿದಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಶವದ ಬಳಿ ಸಿಕ್ಕಿದೆ. ಎನ್ಎನ್ಐ ವರದಿಯ ಪ್ರಕಾರ ಮೃತ ವ್ಯಕ್ತಿಯನ್ನು ಚೇತನ್ ಸೈನಿ (40) ಎಂದು ಗುರುತಿಸಲಾಗಿದೆ. 
ಪದ್ಮಾವತಿ ಹೆಸರಿನಿಂದ ಎಚ್ಚರಿಕೆ ಪತ್ರ, ಬರಹ ಕೊನೆಯಾಗಿರುವುದು ಪದ್ಮಾವತಿ ಚಿತ್ರಕ್ಕೆ ಮತ್ತಷ್ಟು ಸಂಕಷ್ಟ ಉಂಟು ಮಾಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ವೇಳೆ ಪ್ರಾರಂಭದಿಂದಲೂ ಸಂಜಯ್ ಲೀಲಾ ಬನ್ಸಾಲಿಯ ಪದ್ಮಾವತಿ ಚಿತ್ರವನ್ನು ವಿರೋಧಿಸುತ್ತಿರುವ ರಜಪೂತ್ ಕರಣಿ ಸೇನಾ ಈ ಘಟನೆಯಲ್ಲಿ ಸಂಘಟನೆಯ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇದು ನಮ್ಮ ಪ್ರತಿಭಟನೆಯ ರೀತಿಯಲ್ಲ, ಈ ರೀತಿಯ ಪ್ರತಿಭಟನೆಗಳನ್ನು ಮಾಡಬೇಡಿ ಎಂದು ಕರಣಿ ಸೇನಾದ ಸದಸ್ಯ ಮಹಿಪಾಲ್ ಸಿಂಗ್ ಮಕ್ರಾನ ಜನತೆಗೆ ಕರೆ ನೀಡಿದ್ದಾರೆ. 
ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಈಗಲೇ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಜೈಪುರ ಉತ್ತರ ವಿಭಾಗದ ಡಿಸಿಪಿ ಸತ್ಯೇಂದ್ರ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT