ನಹಾರ್ಗಡ್ ಕೋಟೆ 
ದೇಶ

ಜೈಪುರದ ಕೋಟೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ; ಪದ್ಮಾವತಿ ಚಿತ್ರ ವಿರೋಧಿಸಿ ಬೆದರಿಕೆ ಪತ್ರ!

ಪದ್ಮಾವತಿ ಚಿತ್ರದ ವಿರುದ್ಧ ರಜಪೂತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಚಿತ್ರವನ್ನು ವಿರೋಧಿಸಿ ಬೆದರಿಕೆ ಪತ್ರ ಹೊಂದಿರುವ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಜೈಪುರದ ನಹಾರ್ಗಡ್...

ಜೈಪುರ: ಪದ್ಮಾವತಿ ಚಿತ್ರದ ವಿರುದ್ಧ ರಜಪೂತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಜೈಪುರದ ನಹಾರ್ಗಡ್ ಕೋಟೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಶವದ ಬಳಿ ಚಿತ್ರವನ್ನು ವಿರೋಧಿಸಿ ಬೆದರಿಕೆ ಪತ್ರ ಸಿಕ್ಕಿದೆ.
ಕೋಟೆಯ ಕಲ್ಲಿನ ಮೇಲೂ ಸಹ ಚಿತ್ರವನ್ನು ವಿರೋಧಿಸಿ ಬರೆಯಲಾಗಿದ್ದು, ನಾವು ಕೇವಲ ಪ್ರತಿಕೃತಿಗಳನ್ನಷ್ಟೇ ದಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಲಾಗಿದೆ. ಪದ್ಮಾವತಿ ಚಿತ್ರಕ್ಕೆ ವಿರೋಧ, ನಾವು ಕೇವಲ ಪ್ರತಿಕೃತಿಗಳನ್ನಷ್ಟೇ ದಹಿಸುವುದಿಲ್ಲ, ನಾವು ಸಾಯಿಸುತ್ತೇವೆ ಎಂಬ ಸಂದೇಶ ನೇಣು ಬಿದಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಶವದ ಬಳಿ ಸಿಕ್ಕಿದೆ. ಎನ್ಎನ್ಐ ವರದಿಯ ಪ್ರಕಾರ ಮೃತ ವ್ಯಕ್ತಿಯನ್ನು ಚೇತನ್ ಸೈನಿ (40) ಎಂದು ಗುರುತಿಸಲಾಗಿದೆ. 
ಪದ್ಮಾವತಿ ಹೆಸರಿನಿಂದ ಎಚ್ಚರಿಕೆ ಪತ್ರ, ಬರಹ ಕೊನೆಯಾಗಿರುವುದು ಪದ್ಮಾವತಿ ಚಿತ್ರಕ್ಕೆ ಮತ್ತಷ್ಟು ಸಂಕಷ್ಟ ಉಂಟು ಮಾಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ವೇಳೆ ಪ್ರಾರಂಭದಿಂದಲೂ ಸಂಜಯ್ ಲೀಲಾ ಬನ್ಸಾಲಿಯ ಪದ್ಮಾವತಿ ಚಿತ್ರವನ್ನು ವಿರೋಧಿಸುತ್ತಿರುವ ರಜಪೂತ್ ಕರಣಿ ಸೇನಾ ಈ ಘಟನೆಯಲ್ಲಿ ಸಂಘಟನೆಯ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇದು ನಮ್ಮ ಪ್ರತಿಭಟನೆಯ ರೀತಿಯಲ್ಲ, ಈ ರೀತಿಯ ಪ್ರತಿಭಟನೆಗಳನ್ನು ಮಾಡಬೇಡಿ ಎಂದು ಕರಣಿ ಸೇನಾದ ಸದಸ್ಯ ಮಹಿಪಾಲ್ ಸಿಂಗ್ ಮಕ್ರಾನ ಜನತೆಗೆ ಕರೆ ನೀಡಿದ್ದಾರೆ. 
ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಈಗಲೇ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಜೈಪುರ ಉತ್ತರ ವಿಭಾಗದ ಡಿಸಿಪಿ ಸತ್ಯೇಂದ್ರ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT