ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

2022ರೊಳಗೆ ದೇಶದಲ್ಲಿ ಅಪೌಷ್ಟಿಕತೆ ತಗ್ಗಿಸಲು ಕ್ರಮ: ಪ್ರಧಾನಿ ಮೋದಿ

ಭಾರತದಲ್ಲಿ ಪೌಷ್ಠಿಕಾಂಶ ಮತ್ತು ಸಂಬಂಧಿತ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ತಗ್ಗಿಸಲು ತೆಗೆದುಕೊಳ್ಳಬೇಕಾದ ...

ನವದೆಹಲಿ: ಭಾರತದಲ್ಲಿ ಪೌಷ್ಠಿಕಾಂಶ ಮತ್ತು ಸಂಬಂಧಿತ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ತಗ್ಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಅಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದರು.
ದೆಹಲಿಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನ ಮಂತ್ರಿ ಸಚಿವಾಲಯ, ನೀತಿ ಆಯೋಗ ಮತ್ತು ಇತರ ಸಚಿವಾಲಯದ ಅಧಿಕಾರಿಗಳು ಭಾಗವಹಿಸಿದ್ದಾರೆ. ಅಪೌಷ್ಟಿಕತೆಯ ಪ್ರಸ್ತುತ ಸ್ಥಿತಿ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪರಾಮರ್ಶೆ ನಡೆಸಲಾಯಿತು.
ಈ ಬಗ್ಗೆ ಹೇಳಿಕೆ ಹೊರಡಿಸಿರುವ ಪ್ರಧಾನ ಮಂತ್ರಿ ಸಚಿವಾಲಯ, 2022ರೊಳಗೆ ದೇಶದಲ್ಲಿ ಪೌಷ್ಟಿಕಾಂಶ ಸಮಸ್ಯೆಯಲ್ಲಿ ಬದಲಾವಣೆ ತರುವ ಅಗತ್ಯವನ್ನು ಸಭೆಯಲ್ಲಿ ಒತ್ತಿ ಹೇಳಿದ್ದಾರೆ ಎಂದಿದೆ.
ಮಕ್ಕಳಲ್ಲಿ ಕಡಿಮೆ ಪೋಷಣೆ, ಕಡಿಮೆ ಜನನ ತೂಕ ಮತ್ತು ರಕ್ತಹೀನತೆಯನ್ನು ತಗ್ಗಿಸಲು ಆ ನಿಟ್ಟಿನಲ್ಲಿ ಕೆಲಸ ಮಾಡುವ ಅಗತ್ಯವನ್ನು ಪ್ರಧಾನಿ ಸಭೆಯಲ್ಲಿ ತಿಳಿಸಿದರು. 2022ರೊಳಗೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾಗುವ ಸಂದರ್ಭದಲ್ಲಿ ಇದರ ಫಲಿತಾಂಶವನ್ನು ನಾವು ಕಾಣಬೇಕು ಎಂಬುದನ್ನು ಪ್ರಧಾನಿ ಮೋದಿ ಸಭೆಯಲ್ಲಿ ಹೇಳಿದ್ದಾರೆ ಎಂದು ಸಚಿವಾಲಯದ ಅಧಿಕೃತ ಹೇಳಿಕೆ ತಿಳಿಸಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಒಗ್ಗೂಡಿಸಲು ಕರೆ ನೀಡಿದ ಪ್ರಧಾನಿ, ಇದು ಪೋಷಕಾಂಶಗಳ ಕೊರತೆ ತಡೆಗಟ್ಟುವಲ್ಲಿ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT