ತನ್ವೀರ್ ಅಹ್ಮದ್ ಮಿರ್ 
ದೇಶ

ಪ್ರದ್ಯುಮನ್ ಹತ್ಯೆ: ತಲ್ವಾರ್ ದಂಪತಿ ಪರ ವಾಕಲತ್ತು ವಹಿಸಿದ್ದ ವಕೀಲನಿಂದ ಆರೋಪಿ ಬಾಲಕನ ಪರ ವಾದ

ರ‍್ಯಾನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಥಮ ಪಿಯು ವಿದ್ಯಾರ್ಥಿ ಪರ ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್....

ನವದೆಹಲಿ: ರ‍್ಯಾನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಥಮ ಪಿಯು ವಿದ್ಯಾರ್ಥಿ ಪರ ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್ ದಂಪತಿ ಪರ ವಾದಿಸಿದ್ದ ವಕೀಲರು ವಾದ ಮಂಡಿಸಲಿದ್ದಾರೆ. 
ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್ ದಂಪತಿಗಳು ಖುಲಾಸೆಗೊಳ್ಳುವುದರಲ್ಲಿ ಯಶಸ್ವಿಯಾಗಿದ್ದ ವಕೀಲ ತನ್ವೀರ್ ಅಹ್ಮದ್ ಮಿರ್ ಪ್ರಮ್ಯುಮದ್ ಹತ್ಯೆ ಪ್ರಕರಣದ ಆರೋಪಿ ಪ್ರಥಮ ಪಿಯು ವಿದ್ಯಾರ್ಥಿ ಪರವಾಗಿ ವಾದಿಸಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಟಿಸಿದೆ. 
ಆರೋಪಿ ಬಾಲಕನ ತಂದೆಯೊಂದಿಗೆ ಪ್ರಾಥಮಿಕ ಹಂತದ ಮಾತುಕತೆ ನಡೆದಿದೆ. ಷರತ್ತು ಮತ್ತು ನಿಯಮಗಳು ಅಂತಿಮವಾಗುತ್ತಿದ್ದಂತೆಯೇ ತಾವು ಆರೋಪಿ ಪರ ವಕಾಲತ್ತು ವಹಿಸುವುದಾಗಿ ತನ್ವೀರ್ ಅಹ್ಮದ್ ತಿಳಿಸಿದ್ದಾರೆ. ಮಗನ ಪರ ವಕಾಲತ್ತು ವಹಿಸುವುದಕ್ಕಾಗಿ ಅತ್ಯುತ್ತಮ ವಕೀಲರನ್ನು ನೇಮಕ ಮಾಡುವುದಾಗಿ ಆರೋಪಿ ತಂದೆ ಹೇಳಿದ್ದಾರೆ. ಅಷ್ಟೇ ಅಲ್ಲದೇ ಗುರುಗಾಂವ್ ಪೊಲೀಸರು ತಮ್ಮ ಮಗನನ್ನು ಸಾಕ್ಷ್ಯ ಎಂದು ಪರಿಗಣಿಸಿದ್ದರು. ಆದರೆ ಸಿಬಿಐ ಆತನನ್ನು ಆರೋಪಿಯನ್ನಾಗಿಸಿ, ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT