ಎಂ.ವೆಂಕಯ್ಯ ನಾಯ್ಡು 
ದೇಶ

ಹಿಂಸಾತ್ಮಕ ಬೆದರಿಕೆಗಳು ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ: ವೆಂಕಯ್ಯ ನಾಯ್ಡು

ಪ್ರಜಾಪ್ರಭುತ್ವದಲ್ಲಿ ಹಿಂಸಾತ್ಮಕ ಬೆದರಿಕೆಗಳನ್ನು ನೀಡುವುದು, ದೈಹಿಕ ಹಿಂಸೆ ನೀಡಿದರೆ ಅದಕ್ಕೆ ಬಹುಮಾನ....

ನವದೆಹಲಿ: ಪ್ರಜಾಪ್ರಭುತ್ವದಲ್ಲಿ ಹಿಂಸಾತ್ಮಕ ಬೆದರಿಕೆಗಳನ್ನು ನೀಡುವುದು, ದೈಹಿಕ ಹಿಂಸೆ ನೀಡಿದರೆ ಅದಕ್ಕೆ ಬಹುಮಾನ ಘೋಷಿಸುವುದು ಸರಿಯಲ್ಲ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಪದ್ಮಾವತಿ ಚಿತ್ರಕ್ಕೆ ಸಂಬಂಧಪಟ್ಟಂತೆ ದೇಶಾದ್ಯಂತ ನಡೆಯುವ ವಿವಾದ ನಡೆಯುತ್ತಿದ್ದು ಅದನ್ನು ನೇರವಾಗಿ ಪ್ರಸ್ತಾಪಿಸದ ಅವರು, ಚಲನಚಿತ್ರ ಅಥವಾ ಕಲೆ ಹೆಸರಿನಲ್ಲಿ ದೇಶದ ಕಾನೂನನ್ನು ಕಡೆಗಣಿಸುವುದರ ವಿರುದ್ಧ ಅವರು ಎಚ್ಚರಿಕೆ ನೀಡಿದರು.
ದೆಹಲಿಯಲ್ಲಿ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಉಪ ರಾಷ್ಟ್ರಪತಿ ನಾಯ್ಡು, ಚಿತ್ರವೊಂದು ಜನರ ಭಾವನೆಗಳಿಗೆ, ಕೆಲವು ಧರ್ಮಗಳಿಗೆ ಮತ್ತು ಸಮುದಾಯಗಳಿಗೆ ಧಕ್ಕೆಯನ್ನುಂಟುಮಾಡಿದೆ ಎಂದು ಜನರು ಆಪಾದಿಸುತ್ತಿದ್ದು ಇದರಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಮಾಡುತ್ತಾ ಜನರು ಅದಕ್ಕಿಂತ ಮುಂದೆ ಹೋಗಿ ಬಹುಮಾನ, ಹಣಗಳನ್ನು ಘೋಷಿಸುತ್ತಾರೆ. ಇಂತವರಲ್ಲಿ ಬೇಕಾದಷ್ಟು ಹಣವಿದೆಯೋ, ಇಲ್ಲವೋ ನನಗೆ ಸಂಶಯವಿದೆ. ಪ್ರತಿಯೊಬ್ಬರು ಒಂದು ಕೋಟಿ ಹಣ ನೀಡುವುದಾಗಿ ಘೋಷಣೆ ಮಾಡುತ್ತಾರೆ. ಹಾಗಾದರೆ ಆ ಒಂದು ಕೋಟಿ ಹಣ ನೀಡುವುದೆಂದರೆ ಅಷ್ಟು ಸುಲಭವೇ, ಇಂತಹ ವರ್ತನೆ ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಭಟನೆಗೆ ಅವಕಾಶವಿದೆ, ಹಾಗೆಂದು ಶಾರೀರಿಕವಾಗಿ ಹಿಂಸೆ ನೀಡುವುದು, ಬೆದರಿಕೆಯೊಡ್ಡುವುದು, ಕಾನೂನನ್ನು ನಮ್ಮ ಇಷ್ಟದಂತೆ ಕೈಗೆತ್ತಿಕೊಂಡು ಕಾನೂನನ್ನು ಕಡೆಗಣಿಸುವುದು ಬೇಡ ಎಂದು ಸಲಹೆ ನೀಡಿದರು.
ತಾವು ಒಂದು ಚಿತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡುತ್ತಿಲ್ಲ ಎಂದ ಅವರು ಈ ಹಿಂದೆ ಹರಮ್ ಹವಾ, ಕಿಸ್ಸಾ ಕುರ್ಸಿ ಮತ್ತು ಆನಂದಿ ಚಿತ್ರಗಳನ್ನು ನಿಷೇಧಿಸಿರುವುದನ್ನು ಪ್ರಸ್ತಾಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT