ಪ್ರಧಾನಿ ನರೇಂದ್ರ ಮೋದಿ 
ದೇಶ

26/11 ದಾಳಿಯ ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ: ಉಗ್ರವಾದದ ವಿರುದ್ಧ ಕಠಿಣ ಕ್ರಮಕ್ಕೆ ಪ್ರತಿಜ್ಞೆ

ನ.26 ರಂದು ಮನ್ ಕಿ ಬಾತ್ ನ 38 ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, 26/11 ಉಗ್ರ ದಾಳಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ನವದೆಹಲಿ: ನ.26 ರಂದು ಮನ್ ಕಿ ಬಾತ್ ನ 38 ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, 26/11 ಉಗ್ರ ದಾಳಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ನ.26 ದೇಶದ ಸಂವಿಧಾನ ಅಳವಡಿಸಿಕೊಂಡ ದಿನವಾಗಿದೆ. ನ.26 ರಂದು ಸಂವಿಧಾನವನ್ನು ಸ್ಮರಿಸಬೇಕು, ಆದರೆ 9 ವರ್ಷಗಳ ಹಿಂದೆ ಮುಂಬೈ ನಲ್ಲಿ ಭೀಕರ ಉಗ್ರ ದಾಳಿ ಸಂಭವಿಸಿತ್ತು, ಉಗ್ರದಾಳಿಯಲ್ಲಿ ಹೋರಾಡಿ ಹುತಾತ್ಮರಾದ ಯೋಧರ ತ್ಯಾಗವನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದು, ಭಯೋತ್ಪಾದನೆಯನ್ನು ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.  
ಇದೇ ವೇಳೆ ಸಂವಿಧಾನ ದಿನಾಚರಣೆಯ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ದೇಶದ ಸಂವಿಧಾನವನ್ನು ನಿರ್ಮಿಸಲು ಅತ್ಯಂತ ಶ್ರೇಷ್ಠ ಕೊಡುಗೆ ನೀಡಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಹೃದಯಪೂರ್ವಕ ನಮನ ಸಲ್ಲಿಸುತ್ತೇವೆ ಎಂದಿದ್ದಾರೆ. ನಮ್ಮ ಸಂವಿಧಾನ ಸಮಾಜದ ಬಡಾ ಹಾಗೂ ದುರ್ಬಲ ವರ್ಗದವರನ್ನು ರಕ್ಷಿಸುತ್ತದೆ, ನಾವು ಹೆಮ್ಮೆಪಡುವ ಅಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಲು ಸಂವಿಧಾನ ರಚನೆಕಾರರು ಶ್ರಮಿಸಿದ್ದಾರೆ, ಇದೇ ಸಂವಿಧಾನದ ಮಾರ್ಗದರ್ಶನದಲ್ಲಿ ನವ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರಧಾನಿ ದೇಶದ ಜನತೆಗೆ ಕರೆ ನೀಡಿದ್ದಾರೆ. 
ಇನ್ನು ಡಿ.7 ರಂದು ಆಚರಿಸಲಾಗುವ ಸೇನಾ ಧ್ವಜ ದಿನಾಚರಣೆಯ ಬಗ್ಗೆಯೂ ಮೋದಿ ಮನ್ ಕಿ ಬಾತ್ ನಲ್ಲಿ ಮಾತನಾಡಿದ್ದು ದೇಶದ ಪ್ರತಿಯೊಬ್ಬ ಪ್ರಜೆಯೂ ಯೋಧನ ತ್ಯಾಗ ಬಲಿದಾನಗಳಿಗೆ ನಮನ ಸಲ್ಲಿಸುತ್ತಾನೆ. ಚೋಳ, ಛತ್ರಪತಿ ಶಿವಾಜಿ ಸಾಮ್ರಾಜ್ಯದ ಕಾಲಮಾನದಿಂದಲೂ ನಮ್ಮ ದೇಶದ ನೌಕಾ ಪಡೆ ಶ್ರೇಷ್ಠತೆಯನ್ನು ಹೊಂದಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT