ದೇಶ

26/11 ಮುಂಬೈ ದಾಳಿ ಸಂತ್ರಸ್ತರಿಗೆ ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್

Manjula VN
ನವದೆಹಲಿ: 26/11 ಮುಂಬೈ ಉಗ್ರ ದಾಳಿ ನಡೆದ 9 ವರ್ಷ ಕಳೆದಿದ್ದು, ದಾಳಿಯಲ್ಲಿ ಸಾವನ್ನಪ್ಪಿದ ಸಂತ್ರಸ್ತರಿಗೆ ರಾಷ್ಟ್ರಪತಿ ರಾಮ್'ನಾಥ್ ಕೋವಿಂದ್ ಅವರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 
ಮುಂಬೈ ದಾಳಿ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಭಯೋತ್ಪಾದನೆ ಯಾವುದೇ ರೂಪದಲ್ಲಿದ್ದರೂ ಅದನ್ನು ತೊಡೆದು ಹಾಕಲು, ಅದನ್ನು ಸೋಲಿಸಲು ಜನರು ಪಣತೊಡಬೇಕಿದೆ ಎಂದು ಹೇಳಿದ್ದಾರೆ. 
ಮುಂಬೈ ಉಗ್ರರ ದಾಳಿ ನಡೆದು ಇಂದಿಗೆ 9 ವರ್ಷಗಳು ಕಳೆದಿದ್ದು, ಈ ಕರಾಳ ದಿನದಂದು ದಾಳಿಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡವರಿಗಾಗಿ ಸಂತಾಪವನ್ನು ಸೂಚಿಸುತ್ತೇವೆ. ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರ ಯೋಧರಿಗೆ ಗೌರವಗಳನ್ನು ಸಮರ್ಪಿಸುತ್ತೇವೆಂದು ತಿಳಿಸಿದ್ದಾರೆ. 
ಭಯೋತ್ಪಾದನೆ ಯಾವುದೇ ರೂಪದಲ್ಲಿದ್ದರೂ ಅದನ್ನು ಸೋಲಿಸಲು ಹಾಗೂ ತೊಡೆದು ಹಾಕಲು ನಾವು ಪಣತೊಡಬೇಕಿದೆ. ನಮ್ಮ ಜನರು, ನಮ್ಮ ದೇಶ ಹಾಗೂ ನಮ್ಮ ಜಗತ್ತು ಸುರಕ್ಷಿತವಾಗಿರುವಂತೆ ಮಾಡಬೇಕಿದೆ ಎಂದಿದ್ದಾರೆ. 
SCROLL FOR NEXT