ವಿಶ್ವ ಸುಂದರಿ ಮಾನುಷಿ ಛಿಲ್ಲರ್‌ 
ದೇಶ

ಸದ್ಯಕ್ಕೆ ಬಾಲಿವುಡ್ ನಲ್ಲಿ ನಟಿಸುವ ಇಚ್ಚೆ ಇಲ್ಲ: ವಿಶ್ವ ಸುಂದರಿ ಮಾನುಷಿ ಛಿಲ್ಲರ್‌

"ಭಾರತ್ದಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ನೈರ್ಮಲ್ಯದ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಾನು ಭಾಗವಹಿಸುತ್ತೇನೆ..........

ಮುಂಬೈ: "ಭಾರತ್ದಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ನೈರ್ಮಲ್ಯದ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಾನು ಭಾಗವಹಿಸುತ್ತೇನೆ. ಬಾಲಿವುಡ್ ಚಿತ್ರಗಳಲ್ಲಿ ನಟಿಸುವ ಬಯಕೆ ಸದ್ಯಕ್ಕೆ ನನ್ನಲ್ಲಿಲ್ಲ." ವಿಶ್ವ ಸುಂದರಿ ಮಾನುಷಿ ಛಿಲ್ಲರ್‌ ಇಂದು ಮುಂಬೈ ನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ. ಈಕೆ 'ಬ್ಯೂಟಿ ವಿತ್ ಪರ್ಪಸ್' ಸ್ಪರ್ಧೆಯ ಸಹ ವಿಜೇತೆಯಾಗಿದ್ದು ಅಲ್ಲಿ ಅವರು ತಮ್ಮ ಯೋಜನೆಯಾದ 'ಶಕ್ತಿ' ಯನ್ನು ಮಂಡಿಸಿದ್ದಾರೆ. ಇದು ಗ್ರಾಮೀಣ ಭಾರತದ ಮಹಿಳೆಯರಿಗೆ ಸ್ಯಾನಿಟರಿ ನಾಪ್ ಕಿನ್  ಪೂರೈಕೆಗೆ ಸಂಬಂಧಿಸಿದೆ.
"ನಾನು ಈ ಯೋಜನೆಯನ್ನು ಪ್ರಾರಂಭಿಸಿದಾಗ, ಋತುಚಕ್ರದ ಸಮಯದಲ್ಲಿನ ಶುಚಿತ್ವದ ಬಗ್ಗೆ ಮತ್ತು ಸ್ಯಾನಿಟರಿ ನ್ಯಾಪ್ ಕಿನ್ ಉಪಯೋಗದ ಬಗ್ಗೆ ಬಹುತೇಕ ಜನರಿಗೆ ತಿಳಿದಿಲ್ಲ ಎನ್ನುವುದನ್ನು ಅರಿತುಕೊಂಡೆ. ನಾವು ಅದರ ಬಗೆಗೆ ಜನರಿಗೆ ತಿಳುವಳಿಕೆ ನಿಡಬೇಕು ಎನ್ನುವುದನ್ನು ಅರಿತೆನು. ಈ ವಿಶ್ವ ಸುಂದರಿ ಪಟ್ಟವು ಕೇವಲ ಬಾಹ್ಯ ಸೌಂದರ್ಯಕ್ಕಾಗಿ ಮಾತ್ರವೇ ಇಲ್ಲ. ನೀವು ಇದನ್ನು ಯಾವುದೇ ಒಳ್ಳೆಯ ಉದ್ದೇಶಕ್ಕೆ ಹೇಗೆ ಬಳಸಿಕೊಳ್ಳಬಲ್ಲಿರಿ ಎನ್ನುವುದು ಮುಖ್ಯ.
""ಮುಟ್ಟಿನ ಸಮಯದಲ್ಲಿ  ಶುಚಿತ್ವ ಕಾಪಾಡಿಕೊಳ್ಳುವುದು ಹೇಗೆ ಎನ್ನುವ ಬಗೆಗೆ ಜಾಗೃತಿಯನ್ನು ಮೂಡಿಸುವುದರಲ್ಲಿ ನನ್ನ ಪಾತ್ರ ಮಹತ್ವವಾಗಿರುವುದಕ್ಕೆ ನನಗೆ ಸಂತಸವಿದೆ. ಇದಕ್ಕಾಗಿ ನಾನು ಇತರೆ ವಿಶ್ವ ಸುಂದರಿ ಪ್ರಶಸ್ತಿ ವಿಜೇತರೊಡನೆ ಸೇರಿಕೊಳ್ಳುತ್ತೇನೆ. ಈ ಕೆಲಸದಲ್ಲಿ ತೊಡಗಿಕೊಳ್ಳಲು ನಾನು ಉತ್ಸುಕಳಾಗಿದ್ದೇನೆ." ಮಾನುಷಿ ಛಿಲ್ಲರ್‌ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT