ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆ ಇಳಿಮುಖವಾಗಿದೆ ಎಂಬ ಸರ್ಕಾರದ ಹೇಳಿಕೆ ಪ್ರಶ್ನಿಸಿದ ಶಿವಸೇನೆ

ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳ ಚಟುವಟಿಕೆ ಕಡಿಮೆಯಾಗಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು..

ಮುಂಬೈ: ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳ ಚಟುವಟಿಕೆ ಕಡಿಮೆಯಾಗಿದೆ ಎಂಬ ಶಿವಸೇನೆ ಪ್ರಶ್ನಿಸಿದೆ. ಕಣಿವೆ ರಾಜ್ಯದಲ್ಲಿ ಯುವಕರಲ್ಲಿ ಭಯ ಹುಟ್ಟಿಸಲು ಉಗ್ರಗಾಮಿಗಳು ಯೋಧರನ್ನು ಸಾಯಿಸುತ್ತಿದ್ದಾರೆ ಎಂದು ಅದು ಹೇಳಿದೆ.
ಪ್ರಾಂತೀಯ ಸೇನಾ ಯೋಧ ಇರ್ಫಾನ್ ಅಹ್ಮದ್ ಅವರನ್ನು ಹತ್ಯೆ ಮಾಡಿರುವ ಪ್ರಕರಣವನ್ನು ಉಲ್ಲೇಖಿಸಿರುವ ಶಿವಸೇನೆ, ಕಾಶ್ಮೀರಿ ಯುವಕರಲ್ಲಿ ಭಯ ಹುಟ್ಟಿಸಲು ಮತ್ತು ಅವಮಾನ ಮಾಡಲು ಭಯೋತ್ಪಾದಕರು ಹೊಸ ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ ಎಂದಿದೆ.
ಜನಾನರ ಭೀಕರ ಹತ್ಯೆ ಪಾಕಿಸ್ತಾನದ ಯೋಜನೆಯಾಗಿದೆ. ಇವೆಲ್ಲವೂ ಪಾಕಿಸ್ತಾನಿಯರ ಮನದ ಮಾತುಗಳಾಗಿವೆ. ಪ್ರತಿ ತಿಂಗಳು 4ನೇ ಭಾನುವಾರ ಮನ್ ಕಿ ಬಾತ್ ನಡೆಸುವ ವ್ಯಕ್ತಿಗೆ ಇವೆಲ್ಲವೂ ಅರ್ಥವಾಗುವುದಿಲ್ಲವೇ? ಎಂದು ಪ್ರಧಾನಿ ಮೋದಿಯವರ ರೇಡಿಯೋ ಕಾರ್ಯಕ್ರಮವನ್ನು ಪರೋಕ್ಷವಾಗಿ ಶಿವಸೇನೆ ಟೀಕಿಸಿದೆ.
ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾಗಿದ್ದ ಮುಂಬೈ ಭಯೋತ್ಪಾದಕ ದಾಳಿಯ ಮುಖ್ಯ ರೂವಾರಿ ಹಫೀಜ್ ಸಯೀದ್ ನ ಬಿಡುಗಡೆ ಗಡಿ ಭಾಗದಲ್ಲಿ ಉಗ್ರಗಾಮಿಗಳ ಚಟುವಟಿಕೆಗೆ ಹೊಸ ಉತ್ಸಾಹವನ್ನು ನೀಡಿದಂತಾಗುತ್ತದೆ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT