ಇವಾಂಕ ಟ್ರಂಪ್ 
ದೇಶ

ಭಾರತೀಯರೇ ನಮಗೆಲ್ಲಾ ಸ್ಫೂರ್ತಿ: ಇವಾಂಕ ಟ್ರಂಪ್

ಭಾರತೀಯರೇ ನಮಗೆಲ್ಲಾ ಸ್ಫೂರ್ತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪುತ್ರಿ ಹಾಗೂ ಅಮೆರಿಕ ಅಧ್ಯಕ್ಷರ ಹಿರಿಯ ಸಲಹೆಗಾರ್ತಿ ಇವಾಂಕ ಟ್ರಂಪ್ ಮಂಗಳವಾರ ಹೇಳಿದ್ದಾರೆ.

ಹೈದರಾಬಾದ್: ಭಾರತೀಯರೇ ನಮಗೆಲ್ಲಾ ಸ್ಫೂರ್ತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪುತ್ರಿ ಹಾಗೂ ಅಮೆರಿಕ ಅಧ್ಯಕ್ಷರ ಹಿರಿಯ ಸಲಹೆಗಾರ್ತಿ ಇವಾಂಕ ಟ್ರಂಪ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮುತ್ತಿನಗರಿಯಲ್ಲಿ ಅಮೆರಿಕ ಸಹಭಾಗಿತ್ವದಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯಾದ ಮೊದಲ ಜಾಗತಿಕ ಉದ್ಯಮಶೀಲತಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಇವಾಂಕ, ಭಾರತ ಅಮೆರಿಕದ ನಿಜವಾದ ಸ್ನೇಹಿತ ಮತ್ತು ಅತ್ಯಂತ ವೇಗವಾಗಿ ಆರ್ಥಿಕ ಅಭಿವೃದ್ಧಿ ಸಾಧಿಸುತ್ತಿರುವ ದೇಶ ಎಂದರು.
70ನೇ ಸ್ವಾತಂತ್ರ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಭಾರತೀಯರನ್ನು ನಾನು ಅಭಿನಂದಿಸುತ್ತೇನೆ. ಬಾಲ್ಯದಲ್ಲಿ ಚಾಹ ಮಾರುತ್ತಿದ್ದ ವ್ಯಕ್ತಿ ಇಂದು ಭಾರತದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲದ ಪರಿವರ್ತನೆ ಅಥವಾ ಬದಲಾವಣೆ ಸಾಧ್ಯ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಇವಾಂಕ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದರು.
ಭಾರತ ವಿಶ್ವಕ್ಕೆ ಭರವಸೆಯ ರಾಷ್ಟ್ರವಾಗಿ ಕಾಣಿಸುತ್ತಿದೆ. ಮೋದಿ ಪ್ರಜಾಪ್ರಭುತ್ವದ ಸಂಕೇತವಾಗಿದ್ದಾರೆ. ಈ ಶೃಂಗಸಭೆಯು ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕತೆ ಮತ್ತು ರಕ್ಷಣಾತ್ಮಕ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಇವಾಂಕ ಹೇಳಿದರು.

ಪ್ರಧಾನಿ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಶ್ಲಾಘನೀಯ. ಕಳೆದ 10 ವರ್ಷಗಳಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಶೇ.52ರಷ್ಟು ಮಹಿಳಾ ಉದ್ಯಮಿಗಳು ಭಾಗಿಯಾಗಿದ್ದು ಸಂತಸ ತಂದಿದೆ ಎಂದರು.
ಉದ್ಯಮ ಶೀಲತಾ ಸಮಾವೇಶಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಇವಾಂಕ, ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು. ಅಲ್ಲದೇ ಭಾರತದ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡರು.
ಇವಾಂಕ ಅವರು ಶ್ವೇತ ಭವನದ ಹಿರಿಯ ಅಧಿಕಾರಿಗಳ ನಿಯೋಗವೊಂದನ್ನು ಈ ಸಮಾವೇಶಕ್ಕೆ ಕರೆತಂದಿದ್ದು, ಶ್ವೇತ ಭವನ ಸಲಹೆಗಾರ್ತಿಯಾಗಿ ಇದು ಅವರ ಮೊದಲ ಭಾರತ ಭೇಟಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT