ಹಾದಿಯಾ 
ದೇಶ

ಲವ್ ಜಿಹಾದ್ ಪ್ರಕರಣ: ಉಗ್ರನನ್ನು ಕುಟುಂಬಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ- ಹಾದಿಯಾ ತಂದೆ

ಕೇರಳ ಲವ್ ಜಿಹಾದ್ ಪ್ರಕರಣದ ಕೇಂದ್ರ ಬಿಂದುವಾಗಿರುವ ಯುವತಿ ಹಾದಿಯಾ ಶಿಕ್ಷಣ ಮುಗಿಸುವಂತೆ ಸೋಮವಾರ ಸುಪ್ರೀಂ ಕೋರ್ಟ್....

ನವದೆಹಲಿ: ಕೇರಳ ಲವ್ ಜಿಹಾದ್ ಪ್ರಕರಣದ ಕೇಂದ್ರ ಬಿಂದುವಾಗಿರುವ ಯುವತಿ ಹಾದಿಯಾ ಶಿಕ್ಷಣ ಮುಗಿಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸಿದ ಹಾದಿಯಾ ತಂದೆ ಕೆಎಂ ಅಶೋಕನ್ ಅವರು, ಒಬ್ಬ ಉಗ್ರನನ್ನು ನನ್ನ ಕುಟುಂಬಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.
ಇಂದು ತಮ್ಮ ಪುತ್ರಿ ಹಾದಿಯಾ ಅಂತರ್-ಧರ್ಮೀಯ ವಿವಾಹಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವು ಸ್ಪಷ್ಟಪಡಿಸಿದ ಅಶೋಕನ್ ಅವರು, ಒಂದು ಧರ್ಮ ಮತ್ತು ಒಬ್ಬ ದೇವರ ಮೇಲೆ ನನಗೆ ನಂಬಿಕೆ ಇದೆ. ಆದರೆ ಕುಟುಂಬದಲ್ಲಿ ಭಯೋತ್ಪಾದಕರನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಹಾದಿಯಾ ಇಸ್ಲಾಮ್ ಗೆ ಮತಾಂತರಗೊಂಡ ನಂತರ ತಾನು ತೆರಳಬೇಕಿದ್ದ ಸಿರಿಯಾ ಬಗ್ಗೆ ಅವಳಿಗೆ ಯಾವುದೇ ಕಲ್ಪನೆ ಇಲ್ಲ ಎಂದು ಅಶೋಕನ್ ಹೇಳಿದ್ದಾರೆ.
ಹಾದಿಯಾ ಶಿಕ್ಷಣಕ್ಕೆ ಅಡ್ಡಿಯಾದ ಈ ಎಲ್ಲ ಕಹಿ ಘಟನೆಗಳ ಬಗ್ಗೆ ನನಗೆ ಬೇಸರವಿದೆ. ಆದರೆ ಈಗ ಆಕೆಗೆ ಶಿಕ್ಷಣ ಮುಂದುವರಿಸಲು ಕೋರ್ಟ್‌ ಅನುಮತಿ ನೀಡಿರುವುದು ಸಂತಸ ತಂದಿದೆ ಎಂದು ಅಶೋಕನ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ನನ್ನ ಪೋಷಕರು ನನ್ನನ್ನು ಗೃಹ ಬಂಧನದಲ್ಲಿಟ್ಟಿದ್ದಾರೆ ಎಂಬ ಹಾದಿಯಾ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅಶೋಕನ್ ಅವರು, ಮನೆಗೆ ಹೊರಗೂ ಮತ್ತು ಒಳಗೆ ಅವಳಿಗೆ ಸಂಪೂರ್ಣ ಪೊಲೀಸ್ ಭದ್ರತೆ ನೀಡಲಾಗಿತ್ತು ಎಂದಿದ್ದಾರೆ.
ನಿನ್ನೆಯಷ್ಟೇ ಲವ್ ಜಿಹಾದ್ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಶಿಕ್ಷಣ ಮುಂದುವರೆಸಲು ಹಾದಿಯಾಳನ್ನು ತಮಿಳುನಾಡಿನ ಸೇಲಂನಲ್ಲಿರುವ ಶಿವರಾಜ್ ಹೋಮಿಯೋಪಥಿ ಕಾಲೇಜ್ ಗೆ ಕರೆದುಕೊಂಡು ಹೋಗಲಿ. ಕಾಲೇಜ್ ಯುವತಿಗೆ ಹಾಸ್ಟೇಲ್ ಸೌಲಭ್ಯ ಒದಗಿಸಬೇಕು ಮತ್ತು ಕಾಲೇಜ್ ಡೀನ್ ಆಕೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಜನವರಿ ಮೂರನೇ ವಾರಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT