ವಿಶ್ವಸುಂದರಿ ಮಾನುಷಿ ಚಿಲ್ಲರ್ 
ದೇಶ

ಪದ್ಮಾವತಿ ವಿವಾದ: ನಮ್ಮದು ಮಹಿಳಾ ಸ್ನೇಹಿ ಸಮಾಜವಲ್ಲ- ವಿಶ್ವ ಸುಂದರಿ ಮಾನುಷಿ ಚಿಲ್ಲರ್

ಕಾನೂನು ಕ್ರಮ, ವಿಚಾರಣೆಗಳ ಕುರಿತಂತೆ ಭಾರತೀಯ ಮಹಿಳೆಯರು ತಲೆಕೆಡಿಸಿಕೊಳ್ಳಬಾರದು. ನಮ್ಮ ಸಮಾಜ ಮಹಿಳಾ ಸ್ನೇಹಿಯಲ್ಲ ಎಂಬ ಭಾವನೆಗಳಿದ್ದರೂ ಸವಾಲುಗಳನ್ನು ಎದುರಿಸಬೇಕು ಎಂದು ವಿಶ್ವಸುಂದರಿ ಮಾನುಷಿ ಚಿಲ್ಲರ್ ಅವರು ಸೋಮವಾರ ಹೇಳಿದ್ದಾರೆ...

ಮುಂಬೈ: ಕಾನೂನು ಕ್ರಮ, ವಿಚಾರಣೆಗಳ ಕುರಿತಂತೆ ಭಾರತೀಯ ಮಹಿಳೆಯರು ತಲೆಕೆಡಿಸಿಕೊಳ್ಳಬಾರದು. ನಮ್ಮ ಸಮಾಜ ಮಹಿಳಾ ಸ್ನೇಹಿಯಲ್ಲ ಎಂಬ ಭಾವನೆಗಳಿದ್ದರೂ ಸವಾಲುಗಳನ್ನು ಎದುರಿಸಬೇಕು ಎಂದು ವಿಶ್ವಸುಂದರಿ ಮಾನುಷಿ ಚಿಲ್ಲರ್ ಅವರು ಸೋಮವಾರ ಹೇಳಿದ್ದಾರೆ. 
ವಾಣಿಜ್ಯ ನಗರಿ ಮುಂಬೈ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅವರು, ಪದ್ಮಾವತಿ ಚಿತ್ರ ವಿವಾದ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಭಾರತೀಯ ಮಹಿಳೆಯರು ತಮ್ಮ ಬಗ್ಗೆ ವಿಶ್ವಾಸವನ್ನು ಹೆಚ್ಚಿಸಿಕೊಂಡು ಮುಂಬರುವ ಯಾವುದೇ ಸವಾಲುಗಳನ್ನಾದರೂ ಎದುರಿಸಬೇಕು ಎಂದು ಹೇಳಿದ್ದಾರೆ. 
ಜೀವನ ಹಾದಿಯಲ್ಲಿ ನಾವು ಸಾಕಷ್ಟು ನಿಯಂತ್ರಗಳನ್ನು ಎದುರಿಸುತ್ತೇವೆ. ಕೆಲವೊಮ್ಮ ನಮ್ಮದು ಮಹಿಳಾ ಸ್ನೇಹಿ ಸಮಾಜವಲ್ಲ ಎಂಬ ಭಾವನೆಗಳು ಹುಟ್ಟುತ್ತವೆ. ಒಬ್ಬ ವ್ಯಕ್ತಿಯಾಗಿ ನಾವು ಉದಾಹರಣೆಯಾಗಬೇಕು. ವಿಶ್ವಾಸವನ್ನು ಹೆಚ್ಚಿಸಿಕೊಂಡು ಜೀವನ ಹಾದಿಯಲ್ಲಿ ಸಾಗಬೇಕು, ಸಾಧನೆಗಳನನ್ನು ಮಾಡಬೇಕು. 
ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಅಭ್ಯರ್ಥಿಯಾಗಿ ನಾವು ವಿವಿಧ ದೇಶಗಳಲ್ಲಿ ನೃತ್ಯಗಳನ್ನು ಮಾಡಬೇಕಾಗುತ್ತದೆ. ಮಾನುಷಿ ಚಿಲ್ಲರ್ ಅವರು ಸಂಜಯ್ ಲೀಲಾ ಬನ್ಸಾಲಿಯವರ ಗೋಲಿಯೋಂಕಿ ರಾಸ್'ಲೀಲಾ ರಾಮ್ ಲೀಲಾ ಚಿತ್ರದ ಡೋಲ್ ಬಾಜೆ ಹಾಡಿಗೆ ನೃತ್ಯ ಮಾಡಿದ್ದರು. 
ಪೂರ್ವಭ್ಯಾಸದ ಸಂದರ್ಭದಲ್ಲಿ ಸಾಕಷ್ಟು ಯುವತಿಯರು ಈ ಹಾಡಿಗೆ ನತ್ಯ ಮಾಡಿದ್ದರು. ಇದು ನನಗೆ ಬಹಳಷ್ಟು ಸಂತಸವನ್ನು ತಂದಿತ್ತು. ವಿಶ್ವದ ಮುಂದೆ ಭಾರತವನ್ನು ತರಲು ನಾನು ಕೆಲಸ ಮಾಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT