ಸುಪ್ರೀಂ ಕೋರ್ಟ್ 
ದೇಶ

ವರದಕ್ಷಿಣೆ ಕಿರುಕುಳ ಪ್ರಕರಣ: ತನಿಖೆಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡಲು ಸಾದ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಹೇಗೆ ತನಿಖೆ ನಡೆಸಬೇಕೆನ್ನುವುದಕ್ಕೆ ಮಾರ್ಗದರ್ಶನ ಸೂತ್ರಗಳನ್ನು ನೀಡಲು ಸಾದ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಹೇಗೆ ತನಿಖೆ ನಡೆಸಬೇಕೆನ್ನುವುದಕ್ಕೆ ಮಾರ್ಗದರ್ಶನ ಸೂತ್ರಗಳನ್ನು ನೀಡಲು ಸಾದ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್  ಮಿಶ್ರಾ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಜಸ್ಟೀಸ್ ಡಿ.ವೈ. ಚಂದ್ರಚೂಡ ಅವರುಗಳನ್ನೊಳಗೊಂಡ ಪೀಠ ಹೀಗೆಂದು ಅಭಿಪ್ರಾಯಪಟ್ಟಿದೆ ಇದಕ್ಕೂ ಮುನ್ನ ದ್ವಿ ಸದಸ್ಯ ಪೀಠವು ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಪೋಲೀಸರು ಕ್ರಮ ಕೈಗೊಳ್ಳುವ ಮುನ್ನ ನ್ಯಾಯಾಲಯವು ಅದರ ಪರಿಶೀಲನೆಗೆ ಸಮಿತಿ ರಚಿಸಬೇಕೆಂದು ಸೂಚಿಸಿತ್ತು.
ನ್ಯಾಯಾಧೀಶ ಎ.ಕೆ. ಗೋಯಲ್ ನೇತೃತ್ವದ ಪೀಠವು ವರದಕ್ಷಿಣೆ ಕಿರುಕುಳದ ದೂರುಗಳ ಬಗ್ಗೆ ತನಿಖೆ ನಡೆಸುವಾಗ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಬೇಕು ಎಂದಿದ್ದರು
ಹಿರಿಯ ವಕೀಲ ವಿ.ಶೇಖರ್ ಮತ್ತು ಇಂಡು ಮಲ್ಹೋತ್ರಾ-  ಇಬ್ಬರು ಅಮಿಕಸ್ ಕ್ಯೂರಿ ಅವರ ಸಲಹೆಯಂತೆ, ನ್ಯಾಯಾಲಯದ ಮಾರ್ಗದರ್ಶನವನ್ನು ಪ್ರಕರಣದ ಸಂಬಂಧ ಪಟ್ಟವರು "ಒಪ್ಪಿಕೊಳ್ಳಬಹುದು ಅಥವಾ ತಳ್ಳಿಹಾಕಬಹುದು" ಎಂದು ನ್ಯಾಯಾಲಯ ಹೇಳಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ ಅಡಿಯಲ್ಲಿ ವರದಕ್ಷಿಣೆ ಕಿರುಕುಳದ ಪ್ರಕರಣಗಳಲ್ಲಿ ಪೊಲೀಸರು ಹೇಗೆ ಮುಂದುವರಿಯಬೇಕು ಎಂಬುದರ ಬಗ್ಗೆ ಮಾರ್ಗದರ್ಶನಗಳನ್ನು ರೂಪಿಸಬೇಕೆಂದು ಅವರು ಅಭಿಪ್ರಾಯಪಟ್ಟಿದ್ದರು.. ಇದೀಗ ಸುಪ್ರೀಂ ಕೋರ್ಟ್, ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಶಾಸನ ಬದ್ದವಾದ ಕ್ರಮಗಳನ್ನು ಕೈಗೊಳ್ಳಉ (ಐಪಿಸಿ ಸೆಕ್ಷನ್ 498 ಎ ಜಾರಿಗೆ ತರಲು) ಮಾರ್ಗದರ್ಶಿ ಸೂತ್ರಗಳ ಅಗತ್ಯವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!