ಅರುಣ್ ಜೇಟ್ಲಿ 
ದೇಶ

ಸರ್ಕಾರವು ಪ್ರತಿವರ್ಷ 10,000 ಕಿ.ಮೀ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡುತ್ತದೆ: ಅರುಣ್ ಜೇಟ್ಲಿ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತವೂ ಒಂದಾಗಿದ್ದು ವಾರ್ಷಿಕವಾಗಿ ಶೇ. ಏಳರಿಂದ ಎಂಟರಷ್ಟು ಪ್ರಗತಿ ದಾಖಲಿಸುತ್ತಿದೆ ಎಂದಿದ್ದಾರೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತವೂ ಒಂದಾಗಿದ್ದು ವಾರ್ಷಿಕವಾಗಿ ಶೇ. ಏಳರಿಂದ ಎಂಟರಷ್ಟು ಪ್ರಗತಿ ದಾಖಲಿಸುತ್ತಿದೆ ಎಂದಿದ್ದಾರೆ.
"ಮುಂದಿನ ಎರಡು ದಶಕಗಳಲ್ಲಿ ಭಾರತವು ತನ್ನ ಮೂಲಭೂತ ಸೌಕರ್ಯಗಳನ್ನು ನವೀಕರಿಸುವ ಅಗತ್ಯವಿದೆ, ಇದಕ್ಕಾಗಿ ಸಾಕಷ್ಟು ಹೂಡಿಕೆ ಮತ್ತು ಖರ್ಚು ಮಾಡುವುದು ಅಗತ್ಯವಾಗಿದೆ. ಬಳಕೆದಾರರ ಅಗತ್ಯಕ್ಕೆ ತಕ್ಕಂತೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿದೆ"  'ಜಾಗತಿಕ ಮಟ್ಟದ ಮೂಲಸೌಕರ್ಯಕ್ಕಾಗಿ ಭಾರತದ ರಸ್ತೆಮಾರ್ಗ' ಕುರಿತು ಡಿಫೆನ್ಸ್ ಎಸ್ಟೇಟ್ ದಿನಾಚರಣೆ ಭಾಷಣದಲ್ಲಿ ಜೇಟ್ಲಿ ಮಾತನಾಡಿದರು.
ಭಾರತವು ಹೆಚ್ಚು ಮಹತ್ವಾಕಾಂಕ್ಷೆಯ ರಾಷ್ಟ್ರವಾಗಿ ಬದಲಾಗುತ್ತಿದೆ,  ಇದೊಂದು ಸಕಾರಾತ್ಮಕ ಬದಲಾವಣೆಯಾಗಿ ಕಾಣುತ್ತಿದೆ, ಸರ್ಕಾರವು 2007 ರಿಂದ 2017 ರವರೆಗೆ ಮೂಲಭೂತ ಸೌಕರ್ಯಗಳ ಮೇಲೆ ರೂ. 60,000 ಲಕ್ಷ ಕೋಟಿ ರೂ.  ಹೂಡಿಕೆ ಮಾಡಿದೆ. ನಾವು ರಾಷ್ಟ್ರೀಯ ಮೂಲಸೌಕರ್ಯ ಹೂಡಿಕೆ ನಿಧಿಯನ್ನು ರಚಿಸಿದ್ದೇವೆ, ಇದರಲ್ಲಿ ಸರ್ಕಾರ. ಹೂಡಿಕೆ ಮಾಡಿದೆ ಮತ್ತು ವಿದೇಶಿ ಹೂಡಿಕೆದಾರರಿಂದ ಬಂಡವಾಳ ಹೂಡಿಕೆ ಮಾಡಿಸಲಾಗುತ್ತಿದೆ, ಜೇಟ್ಲಿ ವಿವರಿಸಿದರು. 
ಮೂಲಭೂತ ಸೌಕರ್ಯ ಕ್ಷೇತ್ರಕ್ಕೆ ಮುಂದಿನ ಐದು ವರ್ಷಗಳಲ್ಲಿ ರೂ 50,000 ಕೋಟಿ ಮೌಲ್ಯದ ಬಂಡವಾಳ ಹರಿದುಬರಲಿರುವ ಸೂಚನೆಯನ್ನು ಜೇಟ್ಲಿ ನೀಡಿದ್ದಾರೆ. ಜತೆಗೆ, ಪ್ರತಿ ವರ್ಷ ಹೆದ್ದಾರಿಗಳ ನಿರ್ಮಾಣಕ್ಕಾಗಿ ಮಾಡಿದ್ದ ವೆಚ್ಚದ ಬಗ್ಗೆಯೂ ಜೇಟ್ಲಿ ಮಾತನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT