ನವದೆಹಲಿ: ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶ ಭಾರತದ ಅತ್ಯಂತ ಅಪಾಯಕಾರಿ ರಾಜ್ಯ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಮಂಡಳಿ(ಎನ್ ಸಿ ಆರ್ ಬಿ) ಗುರುವಾರ ತಿಳಿಸಿದೆ.
ಎನ್ ಸಿಆರ್ ಬಿ ದಾಖಲೆಗಳ ಪ್ರಕಾರ, 2016ರಲ್ಲಿ ಉತ್ತರ ಪ್ರದೇಶದಲ್ಲೇ ಕೊಲೆ ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಅತಿ ಹೆಚ್ಚು ಘೋರ ಅಪರಾಧಗಳು ನಡೆದಿವೆ. ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ 2016ರಲ್ಲಿ ಒಟ್ಟು 4,889 ಕೊಲೆ ಪ್ರಕರಣಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿರುವ ಬಿಹಾರದಲ್ಲಿ 2,581 ಕೊಲೆ ಪ್ರಕರಣಗಳು ದಾಖಲಾಗಿವೆ.
ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಶೇ. 14.5ರಷ್ಟು(49,262 ಪ್ರಕರಣ)ಪ್ರಕರಣಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಶೇ.9.6ರಷ್ಟು(32,513) ಪ್ರಕರಣಗಳು ದಾಖಲಾಗಿವೆ.
ಇನ್ನು ಯೋಗಿಯ ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಶೇ.12.4ರಷ್ಟು ಹೆಚ್ಚಾಗಿದ್ದು, 2015ರಲ್ಲಿ 34,615 ಪ್ರಕರಣಗಳು ದಾಖಲಾಗಿದ್ದವು. ಆದರೆ 2016ರಲ್ಲಿ 38,947 ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos