ಕೋಜಿಕೋಡ್ ನಲ್ಲಿ ಅಪಾಯಕ್ಕೆ ಸಿಲುಕಿದ ಬೋಟ್ 
ದೇಶ

‘ಒಖಿ’ಚಂಡಮಾರುತಕ್ಕೆ ಕೇರಳ, ತಮಿಳುನಾಡಿನಲ್ಲಿ 9 ಬಲಿ, ಮತ್ತಷ್ಟು ಮಳೆ ಸಾಧ್ಯತೆ

‘ಒಖಿ’ಚಂಡಮಾರುತ ತಮಿಳುನಾಡು ಹಾಗೂ ಕೇರಳದ ಕರಾವಳಿ ತೀರದಲ್ಲಿ ಭಾರಿ ಹಾನಿಯುಂಟು ಮಾಡಿದ್ದು, ತಮಿಳುನಾಡಿನ ಕನ್ಯಾಕುಮಾರಿ....

ಚೆನ್ನೈ: ‘ಒಖಿ’ಚಂಡಮಾರುತ ತಮಿಳುನಾಡು ಹಾಗೂ ಕೇರಳದ ಕರಾವಳಿ ತೀರದಲ್ಲಿ ಭಾರಿ ಹಾನಿಯುಂಟು ಮಾಡಿದ್ದು, ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಚಂಡಮಾರುತ್ತಕ್ಕೆ ಬಲಿಯಾದವರ ಸಂಖ್ಯೆ ಶುಕ್ರವಾರ ಐದಕ್ಕೆ ಏರಿಕೆಯಾಗಿದೆ. 
ಚಂಡಮಾರುತದಿಂದಾಗಿ ಜಿಲ್ಲೆಯಲ್ಲಿ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ತಲಾ 4 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ನೆರೆಯ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ನಿರ್ದೇಶಕ ಎಸ್ ಬಾಲಚಂದ್ರನ್ ಅವರು ಹೇಳಿದ್ದಾರೆ. ಅಲ್ಲದೆ ಮುಂದಿನ ನಾಲ್ಕು ದಿನಗಳಲ್ಲಿ ‘ಒಖಿ’ಚಂಡಮಾರುತ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ತಲುಪಲಿದೆ ಎಂದು ತಿಳಿಸಿದ್ದಾರೆ.
ಚಂಡಮಾರುತ ಅಬ್ಬರಕ್ಕೆ ಕೇರಳದಲ್ಲಿ ನಾಲ್ವರು ಮೃತಪಟ್ಟಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ತೀರ ಸೇರಿದಂತೆ ಕೇರಳದ ಹಲವೆಡೆ ಭಾರಿ ಮಳೆ ಬೀಳಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ತಮಿಳುನಾಡು ಹಾಗೂ ಕೇರಳದ ಕರಾವಳಿ ತೀರ ಹಾಗೂ ಲಕ್ಷದ್ವೀಪ ಸಮೂಹದಲ್ಲಿ ಅಪಾಯದಲ್ಲಿದ್ದ 150 ಮೀನುಗಾರರನ್ನು ಭಾರತೀಯ ನೌಕಾಪಡೆ ಹಾಗೂ ಕರಾವಳಿ ರಕ್ಷಣಾ ಪಡೆ, ವಾಯುಪಡೆ ರಕ್ಷಣೆ ಮಾಡಿವೆ.
ನೆರೆಯ ಎರಡೂ ರಾಜ್ಯಗಳು ಚಂಡಮಾರುತದ ಹೊಡೆತಕ್ಕೆ ಸಿಲುಕಿರುವ ಬೆನ್ನಲ್ಲೆ, ರಾಜ್ಯದ ಬೆಂಗಳೂರು ಸೇರಿದಂತೆ ಮಂಡ್ಯ, ರಾಮನಗರದಲ್ಲಿ ಬೆಳಿಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇದ್ದು, ತುಂತುರು ಮಳೆ ಬಿದ್ದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT