ಯೋಗಿ ಆದಿತ್ಯನಾಥ್ 
ದೇಶ

ಯುಪಿ ಸ್ಥಳೀಯ ಸಂಸ್ಥೆ ಚುನಾವಣೆ: ಅಭಿವೃದ್ಧಿಗೆ ಸಿಕ್ಕ ಜಯ- ಪ್ರಧಾನಿ, ಗೆಲುವು ಕಾರ್ಯಕರ್ತರಿಗೆ ಅರ್ಪಣೆ- ಸಿಎಂ ಯೋಗಿ

ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿದ್ದು, ಈ ಗೆಲವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ....

ಲಖನೌ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿದ್ದು, ಈ ಗೆಲವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ. 
ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವೇ ಗುಜರಾತ್ ವಿಧಾನಸಭೆ ಚುನಾವಣೆಯಲ್ಲೂ ಬರಲಿದೆ ಎಂದು ಹೇಳಿದ್ದಾರೆ.
ಗುಜರಾತ್ ಅಭಿವೃದ್ಧಿ ಬಗ್ಗೆ ಮಾತನಾಡುವ ಜನಕ್ಕೆ ತಮ್ಮ ಸ್ವಕ್ಷೇತ್ರ ಅಮೇಥಿಯಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಯೋಗಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಬಿಜೆಪಿ ಸರ್ಕಾರದ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಅಭಿವೃದ್ಧಿಗೆ ಸಿಕ್ಕ ಜಯ ಎಂದಿದ್ದಾರೆ. ದೇಶದಲ್ಲಿ ಮತ್ತೊಮ್ಮೆ ಅಭಿವೃದ್ಧಿ ಗೆಲುವು ಸಾಧಿಸಿದೆ. ಈ ಭರ್ಜರಿ ಗೆಲುವು ನೀಡಿದ ಉತ್ತರ ಪ್ರದೇಶ ಜನತೆಗ ಧನ್ಯವಾದ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪಕ್ಷದ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಶುಭಾಶಗಳನ್ನು ಕೋರಿದ್ದಾರೆ.
ಉತ್ತರ ಪ್ರದೇಶದ 16 ಮಹಾನಗರ ಪಾಲಿಕೆಗಳ ಪೈಕಿ 14ರಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷ ಬಿಎಸ್‌ಪಿ 2 ಪಾಲಿಕೆಗಳಲ್ಲಿ ಗೆಲವು ಸಾಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!