ಟಿಟಿವಿ ದಿನಕರನ್ 
ದೇಶ

ಜಯಲಲಿತಾ ಸಾವಿನ ಕುರಿತು ಸಿಬಿಐ ತನಿಖೆಗೆ ದಿನಕರನ್ ಆಗ್ರಹ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು....

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಎಐಎಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್ ಅವರು ಸೋಮವಾರ ಒತ್ತಾಯಿಸಿದ್ದಾರೆ.
ತಮಿಳುನಾಡು ಸರ್ಕಾರ ಜಯಲಲಿತಾ ಸಾವಿನ ಕುರಿತು ತನಿಖೆಗೆ ನ್ಯಾಯಮೂರ್ತಿ ಎ ಅರುಮುಗಸ್ವಾಮಿ ನೇತೃತ್ವದ ಆಯೋಗ ರಚಿಸಿದ್ದು, ಆಯೋಗದ ತನಿಖೆಗೆ ನೀವು ಸಹಕರಿಸುತ್ತೀರಾ? ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ದಿನಕರನ್, ನಮಗೆ ಸಿಬಿಐ ತನಿಖೆ ಬೇಕು ಎಂದಿದ್ದಾರೆ.
ಸಿಬಿಐ ತನಿಖೆ ನಡೆಸಿದರೆ ಮಾತ್ರ, ಜಯಲಲಿತಾ ಸಾವಿನ ಕುರಿತು ತದ್ವಿರುದ್ಧ ಹೇಳಿಕೆ ನೀಡುತ್ತಿರುವ ಸಚಿವರ ವಿಚಾರಣೆ ನಡೆಸಲು ಸಾಧ್ಯ ಎಂದು ದಿನಕರನ್ ಹೇಳಿದ್ದಾರೆ.
ಇತ್ತೀಚಿಗಷ್ಟೇ ತಮಿಳುನಾಡು ಅರಣ್ಯ ಸಚಿವ ದಿಂಡಿಗಲ್ ಸಿ ಶ್ರೀನಿವಾಸನ್ ಅವರು, ಜಯಲಲಿತಾ ಆಸ್ಪತ್ರೆಯಲ್ಲಿದ್ದಾಗ ನಾವು ಯಾರೂ ಅವರನ್ನು ನೋಡಿಲ್ಲ. ವಿಕೆ ಶಶಿಕಲಾ ಅವರ ಭಯದಿಂದಾಗಿ ಆ ವೇಳೆ ನೋಡಿದ್ದಾಗಿ ನಾವು ಸುಳ್ಳು ಹೇಳಿದ್ದೇವೆ ಎಂದಿದ್ದರು. ಆದರೆ ಮತ್ತೊಬ್ಬ ಸಚಿವ ಸೆಲ್ಲೂರ್ ರಾಜು, ಎಲ್ಲಾ ಸಚಿವರು ಜಯಲಲಿತಾ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದರು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT