ರಾಮದಾಸ್ ಅತವಾಲೆ 
ದೇಶ

ದಲಿತ ಯುವಕರು ರಮ್ ಗಾಗಿ ಸೇನೆಗೆ ಸೇರಲಿ: ಸಚಿವ ರಾಮದಾಸ್ ಅತವಾಲೆ ವಿವಾದಾತ್ಮಕ ಹೇಳಿಕೆ

ದಲಿತ ಯುವಕರು ದೇಶಿ ಮದ್ಯ ಕುಡಿಯುವ ಬದಲು ಉತ್ತಮ ಆಹಾರ ಮತ್ತು ವಿದೇಶಿ ಮದ್ಯಕ್ಕಾಗಿ ಸೇನೆಗೆ ಸೇರಲಿ ಎಂದು ಕೇಂದ್ರ ಸಾಮಾಜಿಕ ನ್ಯಾಯ...

ಪುಣೆ: ದಲಿತ ಯುವಕರು ದೇಶಿ ಮದ್ಯ ಕುಡಿಯುವ ಬದಲು ಉತ್ತಮ ಆಹಾರ ಮತ್ತು ವಿದೇಶಿ ಮದ್ಯಕ್ಕಾಗಿ ಸೇನೆಗೆ ಸೇರಲಿ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅತವಾಲೆ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅತವಾಲೆ, ಸೇನೆ ಉತ್ತಮ ಆಹಾರ ಮತ್ತು ಮದ್ಯ ಒದಗಿಸುತ್ತದೆ. ದಲಿತ ಯುವಕರು ದೇಶಿ ಮದ್ಯ ಸೇವಿಸಿ ನಿರುದ್ಯೋಗಿಗಳಾಗುವ ಬದಲು ಶಸ್ತ್ರ ಸಜ್ಜಿತ ಸೇನೆಗೆ ಸೇರಲಿ. ಅಲ್ಲಿ ಅವರಿಗೆ ಉಚಿತವಾಗಿ ರಮ್ ಸಿಗುತ್ತದೆ ಎಂದಿದ್ದಾರೆ.
ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ದಲಿತರಿಗೆ ಮೀಸಲಾತಿ ನೀಡಬೇಕು ಎಂದು ನಾವು ಒತ್ತಾಯಿಸಿದ್ದೇವೆ. ದಲಿತ ಸಮುದಾಯದಲ್ಲಿ ಸಾಕಷ್ಟು ಜನ ಹೋರಾಟಗಾರರಿದ್ದು, ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಅತವಾಲೆ ಹೇಳಿದ್ದಾರೆ.
ಸೇನೆಯಲ್ಲೂ ದಲಿತರಿಗೆ ಮೀಸಲಾತಿ ನೀಡಬೇಕು ಎಂಬುದು ನಮ್ಮ ಪಕ್ಷದ ಬಹುದಿನಗಳ ಬೇಡಿಕೆಯಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡುವುದಾಗಿ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ(ಆರ್ ಪಿಐ) ಅಧ್ಯಕ್ಷ ರಾಮದಾಸ್ ಅತವಾಲೆ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT