ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ 
ದೇಶ

ಲಾಲ ಬಹಾದುರ್ ಶಾಸ್ತ್ರಿ ಜನ್ಮ ದಿನ: ರಾಷ್ಟ್ರಪತಿ, ಪ್ರಧಾನಿಯಿಂದ ಗೌರವ ನಮನ

ಭಾರತದ ದ್ವಿತೀಯ ಪ್ರಧಾನಿ ಲೆಫ್ಟಿನೆಂಟ್ ಲಾಲ ಬಹಾದುರ್ ಶಾಸ್ತ್ರಿ ಅವರ ....

ನವದೆಹಲಿ: ಭಾರತದ ದ್ವಿತೀಯ ಪ್ರಧಾನಿ ಲೆಫ್ಟಿನೆಂಟ್ ಲಾಲ ಬಹಾದುರ್ ಶಾಸ್ತ್ರಿ ಅವರ 113ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ದೆಹಲಿಯ ವಿಜಯಾಘಾಟ್ ನಲ್ಲಿರುವ ಅವರ ಸಮಾಧಿ ಬಳಿ ತೆರಳಿ ಪುಷ್ಜ ನಮನ ಸಲ್ಲಿಸಿದರು.
ದೇಶದ ರೈತರು ಮತ್ತು ಯೋಧರಿಗೆ ಲಾಲ ಬಹಾದುರ್ ಶಾಸ್ತ್ರಿಯವರು ಸ್ಪೂರ್ತಿಯಾಗಿದ್ದರು ಎಂದು ಪ್ರಧಾನಿ ಇದಕ್ಕೂ ಮುನ್ನ ಟ್ವಿಟ್ಟರ್ ನಲ್ಲಿ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದರು.
ಲಾಲ ಬಹಾದುರ್ ಶಾಸ್ತ್ರಿ 1904, ಅಕ್ಟೋಬರ್ 2ರಂದು ಉತ್ತರ ಪ್ರದೇಶದ ಮುಗಲ್ ಸರಾಯಿ ಜಿಲ್ಲೆಯಲ್ಲಿ ಜನಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸತ್ಯಾಗ್ರಹಿಯಾಗಿ ಸಣ್ಣ ವಯಸ್ಸಿನಲ್ಲಿಯೇ ಅವರು ರಾಜಕೀಯಕ್ಕೆ ಸೇರಿದರು.
ಭಾರತದಲ್ಲಿ ಆಹಾರ ಉತ್ಪಾದನೆಯನ್ನು ಹೆಚ್ಚಿಸಲು ಹಸಿರು ಕ್ರಾಂತಿಗೆ ಮತ್ತು ಹಾಲಿನ ಪೂರೈಕೆಯನ್ನು ಹೆಚ್ಚಿಸಲು ಶ್ವೇತ ಕ್ರಾಂತಿಯನ್ನು ಪ್ರಚುರಪಡಿಸಲು ಲಾಲ ಬಹಾದುರ್ ಶಾಸ್ತ್ರಿ ಕೊಡುಗೆ ಸಲ್ಲಿಸಿದ್ದಾರೆ.
1964ರಲ್ಲಿ ಭಾರತದ ಪ್ರಧಾನಿಯಾದ ಲಾಲ ಬಹಾದುರ್ ಶಾಸ್ತ್ರಿ 1965ರ ಭಾರತ-ಪಾಕಿಸ್ತಾನ ಯುದ್ಧವನ್ನು ಮುನ್ನಡೆಸಿದ್ದರು. 1966, ಜನವರಿ 11ರಂದು ತಾಷ್ಕೆಂಟ್ ನಲ್ಲಿ ಕೊನೆಯುಸಿರೆಳೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT