ಸಂಗ್ರಹ ಚಿತ್ರ 
ದೇಶ

ಯೋಧರ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ: ರಕ್ಷಣಾ ತಜ್ಞ

ಶ್ರೀನಗರ ವಿಮಾನ ನಿಲ್ದಾಣದ ಸಮೀಪವಿರುವ ಬಿಎಸ್ಎಫ್ ಕ್ಯಾಂಪ್ ಮೇಲಿನ ಆತ್ಮಾಹುತಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಯನ್ನು ರಕ್ಷಣಾ ತಜ್ಞ ಉದಯ್ ಭಾಸ್ಕರ್ ಅವರು ಕೊಂಡಾಡಿದ್ದಾರೆ...

ನವದೆಹಲಿ: ಶ್ರೀನಗರ ವಿಮಾನ ನಿಲ್ದಾಣದ ಸಮೀಪವಿರುವ ಬಿಎಸ್ಎಫ್ ಕ್ಯಾಂಪ್ ಮೇಲಿನ ಆತ್ಮಾಹುತಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಯನ್ನು ರಕ್ಷಣಾ ತಜ್ಞ ಉದಯ್ ಭಾಸ್ಕರ್ ಅವರು ಕೊಂಡಾಡಿದ್ದಾರೆ. 
ಉಗ್ರರ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಬಿಎಸ್ಎಫ್ ಕ್ಯಾಂಪ್ ಮೇಲೆ ಮೂವರು ಉಗ್ರರು ದಾಳಿ ನಡೆಸಿದ್ದು, ಉಗ್ರರ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಯೋಧರ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬೇಕಾಗಿದ್ದ ದೊಡ್ಡ ದುರಂತಗಳು ತಪ್ಪುತ್ತಿವೆ ಎಂದು ಹೇಳಿದ್ದಾರೆ. 
ಕಳೆದ ಹಲವು ವರ್ಷಗಳಿಂದಲೂ ಉಗ್ರರು ಭಾರತದ ಮೇಲೆ ಪದೇ ಪದೇ ದಾಳಿ ನಡೆಸುತ್ತಿದ್ದಾರೆ. ಉಗ್ರರು ಪದೇ ಪದೇ ದಾಳಿ ನಡೆಸುತ್ತಿರುವುದರಿಂದ ಭಾರತೀಯ ಯೋಧರು ಸದಾಕಾಲ ಹೋರಾಟ ಮಾಡಲು ಸಿದ್ಧರಿರುವಂತಾಗಿದೆ. ಯೋಧರ ಸಮಯ ಪ್ರಜ್ಞೆಗಳಿಂದಾಗಿಯೇ ದಾಳಿ ನಡೆಸುವ ಉಗ್ರರು ಯಾರ ಗುರ್ತಿಕೆಗಳು ಪತ್ತೆಯಾಗುತ್ತಿವೆ ಎಂದು ತಿಳಿಸಿದ್ದಾರೆ. 
ಭಾರತದಲ್ಲಿ ದಸರಾ ಹಾಗೂ ದೀಪಾವಳಿಯಂತಹ ಹಬ್ಬಗಳ ದಿನಗಳು ಬಂತೆಂದರೆ ಸಾಕು ಉಗ್ರರು ದಾಳಿ ನಡೆಸಲು ಆರಂಭಿಸುತ್ತಾರೆ. ಹಬ್ಬದ ದಿನಗಳಲ್ಲಿ ದೇಶದಲ್ಲಿ ರಕ್ತದೋಕುಳಿ ನಡೆಸಲು ಉಗ್ರರು ಸಂಚು ರೂಪಿಸುತ್ತಿರುತ್ತಾರೆ. ಇದು ಸಾಮಾನ್ಯವಾಗಿ ಹೋಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT