ನಟ ದಿಲೀಪ್ 
ದೇಶ

ಮಲಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್'ಗೆ ಕೇರಳ ಹೈಕೋರ್ಟ್ ಜಾಮೀನು

ಮಲಯಾಳಂ ನಟಿ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ದಿಲೀಪ್ ಅವರಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ...

ಕೊಚ್ಚಿ: ಮಲಯಾಳಂ ನಟಿ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ದಿಲೀಪ್ ಅವರಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಧಿಸಿದಂತೆ ದಿಲೀಪ್ ಅವರನ್ನು ಕಳೆದ ಜುಲೈ10 ರಂದು ಬಂಧನಕ್ಕೊಳಪಡಿಸಲಾಗಿತ್ತು. ಬಂಧನಕ್ಕೊಳಗಾದ ಬಳಿಕ ಎರಡು ಬಾರಿ ದಿಲೀಪ್ ಅವರು ಜಾಮೀನು ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದರು. ಎರಡೂ ಬಾರಿಯೂ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ದಿಲೀಪ್ ಅವರು ಮತ್ತೆ ಮೂರನೇ ಬಾರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯದ ತೀರ್ಪನ್ನು ಕಾಯ್ದಿರಿಸಿತ್ತು. ಇದರಂತೆ ಇಂದು ತೀರ್ಪು ಪ್ರಕಟಿಸಿದ್ದು, ಕಠಿಣ ಷರತ್ತುಗಳ ಮೇರೆಗೆ ದಿಲೀಪ್ ಅವರಿಗೆ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ. 

ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಮುಖ ಆರೋಪಿ ಪಲ್ಸರ್ ಸುನಿಯನ್ನು ಫೆ.23ರಂದು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣ ಸಂಬಂಧ ನಟ ದಿಲೀಪ್ ಅವರನ್ನು ಸಹ ಪೊಲೀಸರು ಬಂಧನಕ್ಕೊಳಪಡಿಸಿದ್ದರು. 

ಪ್ರಕರಣ ಸಂಬಂಧ ಸುನೀಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT