ಲಾಲು ಪ್ರಸಾದ್ ಯಾದವ್ ಮತ್ತು ಪುತ್ರ ತೇಜಸ್ವಿ ಯಾದವ್ 
ದೇಶ

ರೈಲ್ವೇ ಹೋಟೆಲ್ ಗುತ್ತಿಗೆಯಲ್ಲಿ ಅಕ್ರಮ: ಲಾಲು, ತೇಜಸ್ವಿಗೆ ಮತ್ತೆ ಸಮನ್ಸ್ ಜಾರಿ ಮಾಡಿದ ಸಿಬಿಐ

ಲಾಲು ಪ್ರಸಾದ್ ಯಾದವ್ ಅವರು ರೈಲ್ವೇ ಸಚಿವರಾಗಿದ್ದಾಗ 2 ಹೋಟೆಲ್ ಗಳನ್ನು ಖಾಸಗಿಯವರಿಗೆ ನೀಡಿದ್ದರಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ಜಾರಿ ಮಾಡಿದೆ...

ನವದೆಹಲಿ: ಲಾಲು ಪ್ರಸಾದ್ ಯಾದವ್ ಅವರು ರೈಲ್ವೇ ಸಚಿವರಾಗಿದ್ದಾಗ 2 ಹೋಟೆಲ್ ಗಳನ್ನು ಖಾಸಗಿಯವರಿಗೆ ನೀಡಿದ್ದರಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ಜಾರಿ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. 

ಹೋಟೆಲ್ ಗುತ್ತಿಗೆ ಅಕ್ರಮವನ್ನು ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಿಬಿಐ ನ್ಯಾಯಾಲಯ ಈ ಹಿಂದೆ ಪ್ರಕರಣ ಸಂಬಂಧ ಸೆ.11-12 ರಂದು ವಿಚಾರಣೆಗೆ ಹಾಜರಾಗುವಂತೆ ಲಾಲೂ ಹಾಗೂ ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. 

ಸಿಬಿಐ ಸಮನ್ಸ್ ಜಾರಿ ಮಾಡಿದ್ದರೂ, ಲಾಲೂ ಹಾಗೂ ತೇಜಸ್ವಿ ಅವರು ವಿಚಾರಣೆ ಹಾಜರಾಗಿರಲಿಲ್ಲ. ಇದೀಗ ಮತ್ತೆ ಇಬ್ಬರಿಗೂ ಸಮನ್ಸ್ ಜಾರಿ ಮಾಡಿರುವ ಸಿಬಿಐ ನ್ಯಾಯಾಲಯ ಅಕ್ಟೋಬರ್. 4-5 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ. 

ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರು ರೈಲ್ವೇ ಸಚಿವರಾಗಿದ್ದಾಗ 2 ಹೋಟೆಲ್ ಗಳನ್ನು ಖಾಸಗಿಯವರಿಗೆ ನೀಡಿದ್ದರಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದಲ್ಲಿ ಲಾಲು, ಅವರ ಪತ್ನಿ ರಾಬ್ಡಿದೇವಿ ಮತ್ತು ಪುತ್ರ, ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಸಿಬಿಐ ಜುಲೈ.7ರಂದು ಪ್ರಕರಣ ದಾಖಲಿಸಿಕೊಂಡಿತ್ತು. 
ರಾಂಚಿ ಮತ್ತು ಪುರಿಯಲ್ಲಿರುವ ರೈಲ್ವೆಯ ಮಾಲೀಕತ್ವದ ಬಿಎನ್ಆರ್ ಹೋಟೆಲ್ ಗಳ ನಿಯಂತ್ರಣವನ್ನು ಹರ್ಷ ಕೊಚಾರ್ ಅವರ ಮಾಲೀಕತ್ವದ ಸುಜಾತಾ ಹೋಟೆಲ್ ಪ್ರೈವೇಟ್ ಲಿಮಿಟೆಡ್ (ಎಸ್ಎಚ್'ಪಿಎಲ್) ಎಂಬ ಕಂಪನಿಗೆ ನೀಡುವುದಕ್ಕಾಗಿ ಲಾಲು ಅವರು ಇತರರ ಜತೆ ಸೇರಿ ಷಡ್ಯಂತ್ರ ಮಾಡಿದ್ದಾರೆ. ಹೋಟೆಲ್ ಗಳನ್ನು ಗುತ್ತಿಗೆ ನೀಡಿದ್ದಕ್ಕೆ ಪ್ರತಿಯಾಗಿ ಪಾಟ್ನದಲ್ಲಿ 3ಎಕರೆ ಸ್ಥಳ ಪಡೆದುಕೊಂಡಿದ್ದಾರೆ. 

ಈಗ ರೂ.94 ಕೋಟಿ ಬೆಲೆ ಬಾಳುವ ಸ್ಥಳವನ್ನು ಮೊದಲಿಗೆ ಲಾಲೂ ಅವರ ಆಪ್ತ ಪ್ರೇಮ್ ಚಂದ್ ಗುಪ್ತಾ ಅವರ ಹೆಂಡತಿ ಸರಳಾ ಅವರು ನಿರ್ದೇಶಕರಾಗಿದ್ದ ಡಿಲೈಟ್ ಮಾರ್ಕೆಟಿಂಗ್ ಪ್ರೈ.ಲಿ (ಡಿಎಂಪಿಎಲ್) ಸಂಸ್ಥೆಗೆ ರೂ.1.47 ಕೋಟಿಗೆ ನೀಡಲಾಗಿತ್ತು. ಈ ಹಣವನ್ನು ರಹಸ್ಯವಾಗಿ ಷೇರುಗಳ ರೂಪದಲ್ಲಿ ಪಾವತಿ ಮಾಡಲಾಗಿತ್ತು. ಈ ಮಾರಾಟ 2005ರ ಫೆ.5 ರಂದು ನಡೆದಿತ್ತು. ಪುರಿ ಮತ್ತು ರಾಂಚಿಯ ಹೋಟೆಲ್ ಗಳನ್ನು ಕೊಚಾರ್ ಅವರಿಗೆ 15 ವರ್ಷದ ಅವಧಿಗೆ ಗುತ್ತಿಗೆಗೆ ನಿರ್ಧಾರವನ್ನೂ ಅದೇ ದಿನ ಕೈಗೊಳ್ಳಲಾಗಿದೆ. 

ಲಾಲೂ ಪ್ರಸಾದ್ ಅವರು ಸಚಿವ ಸ್ಥಾನದಿಂದ ಕೆಳಗೆ ಇಳಿದ ಬಳಿಕ 2010ರಿಂದ 14ರ ಅವಧಿಯಲ್ಲಿ ರಾಬ್ಡಿದೇವಿ ಮತ್ತು ಪುತ್ರ ತೇಜಸ್ವಿಯವರ ಮಾಲೀಕತ್ವದ ಲಾರಾ ಪ್ರೊಜೆಕ್ಟ್ಸ್'ಗೆ ಡಿಎಂಪಿಎಲ್ ಷೇರುಗಳನ್ನು ವರ್ಗಾಯಿಸಿತು. ರೂ.32.5 ಕೋಟಿ ಮೌಲ್ಯದ ಡಿಎಂಸಿಎಲ್ ಕಂಪನಿಯ ಶೇರುಗಳನ್ನು ಕೇವಲ ರೂ.64 ಲಕ್ಷಕ್ಕೆ ಲಾರಾ ಪ್ರೋಜೆಕ್ಟ್ಸ್'ಗೆ ನೀಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT