ವಿಜಯ್ ಸರ್ ದೇಸಾಯಿ 
ದೇಶ

ಕರ್ನಾಟಕದ ಲಮಾಣಿ ಸಮುದಾಯದವರಿಗೆ ಚಿಲ್ಲರೆ ಮೀನುಗಳ ಮಾರಾಟಕ್ಕೆ ನಿಷೇಧ: ಗೋವಾ ಸರ್ಕಾರ

ಗೋವಾದಲ್ಲಿ ಕರ್ನಾಟಕದ ಲಮಾಣಿ ಸಮುದಾಯಕ್ಕೆ ಮೀನುಗಳ ಚಿಲ್ಲರೆ ಮಾರಾಟಕ್ಕೆ ಇನ್ನು ಮುಂದೆ ಅವಕಾಶ ನೀಡುವುದಿಲ್ಲ ಎಂದು ಗೋವಾ....

ಪಣಜಿ: ಗೋವಾದಲ್ಲಿ  ಕರ್ನಾಟಕದ ಲಮಾಣಿ ಸಮುದಾಯದವರಿಗೆ ಮೀನುಗಳ ಚಿಲ್ಲರೆ ಮಾರಾಟಕ್ಕೆ ಇನ್ನು ಮುಂದೆ ಅವಕಾಶ ನೀಡುವುದಿಲ್ಲ ಎಂದು ಗೋವಾ ರಾಜ್ಯದ ಕೃಷಿ ಸಚಿವ ವಿಜಯ್ ಸರ್ದೇಸಾಯಿ ಹೇಳಿದ್ದಾರೆ. 
ಇದಕ್ಕೂ ಮುನ್ನ ಗೋವಾದ ಪ್ರವಾಸೋದ್ಯಮ ಇಲಾಖೆ ಸಚಿವ ಮನೋಹರ್ ಅಜೌಂಕರ್ ಲಮಾಣಿ ಸಮುದಾಯಕ್ಕೆ ಮೀನುಗಳ ಮಾರಾಟಕ್ಕೆ ನಿಷೇಧ ಹೇರುವುದಾಗಿ ಹೇಳಿದ್ದರು.
ಕರ್ನಾಟಕ ಮೂಲದ ಲಮಾಣಿ ಸಮುದಾಯ ಮೀನುಗಳ ಚಿಲ್ಲರೆ ಮಾರಾಟ ನಡೆಸುತ್ತಿದ್ದು ಸಮುದ್ರ ತೀರಗಳಲ್ಲಿ ಕಪ್ಪೆಚಿಪ್ಪು, ಮುತ್ತುಗಳಂತಹ ವಸ್ತುಗಳನ್ನು ಮಾರಾಟ ಮಾಡುತ್ತವೆ.
ದಕ್ಷಿಣ ಗೋವಾದ ಮರ್ಗಾವೊ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಮೀನುಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ಗೋವಾದ ಸ್ಥಳೀಯ ಚಿಲ್ಲರೆ ಮೀನು ಮಾರಾಟಗಾರರು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಸರ್ದೇಸಾಯಿ ಈ ಹೇಳಿಕೆ ನೀಡಿದ್ದಾರೆ.
ಸಗಟು ಮಾರುಕಟ್ಟೆಯಲ್ಲಿ  ಲಮಾಣಿ ಸಮುದಾಯದ ಚಿಲ್ಲರೆ ಮೀನು ಮಾರಾಟ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮೀನುಗಾರಿಕೆ ಸಚಿವ ವಿನೋದ್ ಪಲ್ಯೆಕರ್ ತಿಳಿಸಿದ್ದರು.
ನಿರ್ದಿಷ್ಟ ದೂರುಗಳು ಬಂದ ಹಿನ್ನೆಲೆಯಲ್ಲಿ ಲಮಾಣಿ  ಸಮುದಾಯವನ್ನು ನಮೂದಿಸಿದ್ದೆ. ಅದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿಯೂ ಗೋವಾ ಕೃಷಿ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT