ಗುಜರಾತ್: ವಾರದಲ್ಲಿ ಮೂರನೇ ಪ್ರಕರಣ- ಮೀಸೆ ಬೆಳೆಸಿದ್ದ ದಲಿತ ಯುವಕನ ಮೇಲೆ ದಾಳಿ 
ದೇಶ

ಗುಜರಾತ್: ಮೀಸೆ ಬೆಳೆಸಿದ್ದ ದಲಿತ ಯುವಕನ ಮೇಲೆ ದಾಳಿ- ವಾರದಲ್ಲಿ ಮೂರನೇ ಪ್ರಕರಣ

ಗುಜರಾತ್ ನಲ್ಲಿ ದಲಿತ ಯುವಕರ ಮೇಲೆ ದಾಳಿ ಮುಂದುವರೆದಿದ್ದು, ಮೀಸೆ ಬೆಳೆಸಿದ್ದಕ್ಕಾಗಿ 17 ವರ್ಷದ ದಲಿತ ಯುವಕನ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಗಾಂಧಿನಗರ: ಗುಜರಾತ್ ನಲ್ಲಿ ದಲಿತ ಯುವಕರ ಮೇಲೆ ದಾಳಿ ಮುಂದುವರೆದಿದ್ದು, ಮೀಸೆ ಬೆಳೆಸಿದ್ದಕ್ಕಾಗಿ 17 ವರ್ಷದ ದಲಿತ ಯುವಕನ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. 
ಗಾಂಧಿ ನಗರದ ಗ್ರಾಮದಲ್ಲಿ ಈ ಹಿಂದೆ ಇಬ್ಬರು ದಲಿತ ಯುವಕರನ್ನು ಇದೇ ಕಾರಣಕ್ಕೆ ಥಳಿಸಲಾಗಿತ್ತು. ಇದಾದ ಬೆನ್ನಲ್ಲೇ ಗಾಂಧಿನಗರದ ಮತ್ತೊಂದು ಗ್ರಾಮದಲ್ಲಿ ದಲಿತ ಯುವಕನನ್ನು ಥಳಿಸಲಾಗಿದ್ದು, ಒಂದೇ ವಾರದ ಅಂತರದಲ್ಲಿ ನಡೆದಿರುವ ಮೂರನೇ ಪ್ರಕರಣ ಇದಾಗಿದೆ. 
ತಮ್ಮ ವಿರುದ್ಧ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಸುಮಾರು 300 ದಲಿತರು ವಾಟ್ಸ್ ಆಪ್ ಡಿಪಿಯನ್ನು ಮೀಸೆ ಚಿತ್ರದ ಸಹಿತ ಇರುವ ಮಿ.ದಲಿತ್ ಎಂಬ ಬರಹದೊಂದಿಗೆ ಅಪ್ಡೇಟ್ ಮಾಡಿಕೊಂಡಿದ್ದಾರೆ. 
ಪರೀಕ್ಷೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ನನ್ನ ಮೇಲೆ ದೌರ್ಜನ್ಯ ನಡೆದಿದೆ ಎಂದು ಹಲ್ಲೆಗೊಳಗಾದ ದಲಿತ ಯುವಕ ಆರೋಪಿಸಿದ್ದಾನೆ. ಸೆ.25 ರಂದು ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ತನ್ನ ಮೇಲೂ ಹಲ್ಲೆ ನಡೆದಿದೆ ಎಂದು ಯುವಜ ಆರೋಪಿಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ