ಗುಜರಾತ್: ವಾರದಲ್ಲಿ ಮೂರನೇ ಪ್ರಕರಣ- ಮೀಸೆ ಬೆಳೆಸಿದ್ದ ದಲಿತ ಯುವಕನ ಮೇಲೆ ದಾಳಿ 
ದೇಶ

ಗುಜರಾತ್: ಮೀಸೆ ಬೆಳೆಸಿದ್ದ ದಲಿತ ಯುವಕನ ಮೇಲೆ ದಾಳಿ- ವಾರದಲ್ಲಿ ಮೂರನೇ ಪ್ರಕರಣ

ಗುಜರಾತ್ ನಲ್ಲಿ ದಲಿತ ಯುವಕರ ಮೇಲೆ ದಾಳಿ ಮುಂದುವರೆದಿದ್ದು, ಮೀಸೆ ಬೆಳೆಸಿದ್ದಕ್ಕಾಗಿ 17 ವರ್ಷದ ದಲಿತ ಯುವಕನ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಗಾಂಧಿನಗರ: ಗುಜರಾತ್ ನಲ್ಲಿ ದಲಿತ ಯುವಕರ ಮೇಲೆ ದಾಳಿ ಮುಂದುವರೆದಿದ್ದು, ಮೀಸೆ ಬೆಳೆಸಿದ್ದಕ್ಕಾಗಿ 17 ವರ್ಷದ ದಲಿತ ಯುವಕನ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. 
ಗಾಂಧಿ ನಗರದ ಗ್ರಾಮದಲ್ಲಿ ಈ ಹಿಂದೆ ಇಬ್ಬರು ದಲಿತ ಯುವಕರನ್ನು ಇದೇ ಕಾರಣಕ್ಕೆ ಥಳಿಸಲಾಗಿತ್ತು. ಇದಾದ ಬೆನ್ನಲ್ಲೇ ಗಾಂಧಿನಗರದ ಮತ್ತೊಂದು ಗ್ರಾಮದಲ್ಲಿ ದಲಿತ ಯುವಕನನ್ನು ಥಳಿಸಲಾಗಿದ್ದು, ಒಂದೇ ವಾರದ ಅಂತರದಲ್ಲಿ ನಡೆದಿರುವ ಮೂರನೇ ಪ್ರಕರಣ ಇದಾಗಿದೆ. 
ತಮ್ಮ ವಿರುದ್ಧ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಸುಮಾರು 300 ದಲಿತರು ವಾಟ್ಸ್ ಆಪ್ ಡಿಪಿಯನ್ನು ಮೀಸೆ ಚಿತ್ರದ ಸಹಿತ ಇರುವ ಮಿ.ದಲಿತ್ ಎಂಬ ಬರಹದೊಂದಿಗೆ ಅಪ್ಡೇಟ್ ಮಾಡಿಕೊಂಡಿದ್ದಾರೆ. 
ಪರೀಕ್ಷೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ನನ್ನ ಮೇಲೆ ದೌರ್ಜನ್ಯ ನಡೆದಿದೆ ಎಂದು ಹಲ್ಲೆಗೊಳಗಾದ ದಲಿತ ಯುವಕ ಆರೋಪಿಸಿದ್ದಾನೆ. ಸೆ.25 ರಂದು ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ತನ್ನ ಮೇಲೂ ಹಲ್ಲೆ ನಡೆದಿದೆ ಎಂದು ಯುವಜ ಆರೋಪಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT