ಯಾತ್ರೆಯಲ್ಲಿ ಅಮಿತ್ ಶಾ 
ದೇಶ

ಅಮಿತ್ ಶಾ ಕೇರಳ ಪ್ರವಾಸ ದಿಢೀರ್ ರದ್ದು, ಜನರಕ್ಷಾ ಯಾತ್ರೆಗೆ ಗೈರು

ಬಿಜೆಪಿ ಕಾರ್ಯಕರ್ತರ ಮೇಲಿನ ಹಿಂಸಾಚಾರ ಖಂಡಿಸಿ ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾ ಯಾತ್ರೆಯಲ್ಲಿ ...

ಕಣ್ಣೂರು: ಬಿಜೆಪಿ ಕಾರ್ಯಕರ್ತರ ಮೇಲಿನ ಹಿಂಸಾಚಾರ ಖಂಡಿಸಿ ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ದಿಢೀರ್ ತಮ್ಮ ಪ್ರವಾಸವನ್ನು ರದ್ದುಗೊಳಿಸಿ ದೆಹಲಿಗೆ ಮರಳಿದ್ದಾರೆ.
ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸ್ವಗ್ರಾಮದತ್ತ ಜನರಕ್ಷಾ ಯಾತ್ರೆ ಸಾಗುತ್ತಿದ್ದು, ಅಮಿತ್ ಶಾ ಗೈರು ಆಗಿದ್ದಾರೆ.
ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ತುರ್ತು ಮಾತುಕತೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅವರು ದಿಢೀರ್ ದೆಹಲಿಗೆ ತೆರಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಂ ರಾಜಶೇಖರನ್ ಅವರು ವರದಿಗಾರರಿಗೆ ತಿಳಿಸಿದ್ದಾರೆ. ಆದರೆ ಜನರಕ್ಷಾ ಯಾತ್ರೆಗೆ ಜನ ಬೆಂಬಲ ಇಲ್ಲದ ಹಿನ್ನೆಲೆಯಲ್ಲಿ ಶಾ ಅವರು ಪ್ರವಾಸ ಮೊಟಕುಗೊಳಿಸಿದ್ದಾರೆಂಬ ಊಹಾಪೋಹವನ್ನು ಬಿಜೆಪಿ ಮುಖಂಡರು ತಳ್ಳಿಹಾಕಿದ್ದಾರೆ.
ಅಕ್ಟೋಬರ್ 3ರಂದು ಕಣ್ಣೂರಿನ ಪಯ್ಯನ್ನೂರಿನಲ್ಲಿ 15 ದಿನಗಳ ಜನರಕ್ಷಾ ಯಾತ್ರೆಗೆ ಅಮಿತ್ ಶಾ ಚಾಲನೆ ನೀಡಿದ್ದರು. ನಿನ್ನೆ ಯಾತ್ರೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾಗವಹಿಸಿದ್ದರು. ಯಾತ್ರೆ ಅಕ್ಟೋಬರ್ 17ರಂದು ತಿರುವನಂತಪುರಂನಲ್ಲಿ ಅಂತ್ಯಗೊಳ್ಳಲಿದ್ದು, ಯಾತ್ರೆಯ ಕೊನೆಯ ಸಮಾವೇಶದಲ್ಲಿ ಮಾತ್ರ ಶಾ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ವಕ್ತಾರರು ಸ್ಪಷ್ಟಪಡಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

SCROLL FOR NEXT