ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ 
ದೇಶ

ಇದೇ ಮೊದಲ ಬಾರಿಗೆ ಕೇರಳ ದೇವಸ್ಥಾನಗಳಲ್ಲಿ ಅರ್ಚಕರಾಗಿ ಆರು ದಲಿತರ ನೇಮಕಕ್ಕೆ ಶಿಫಾರಸು

ಇದೇ ಮೊದಲ ಬಾರಿಗೆ ಕೇರಳದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಆರು ದಲಿತರು ಸೇರಿದಂತೆ 36 ಬ್ರಾಹ್ಮಣೇತರರನ್ನು ...

ತಿರುವನಂತಪುರಂ: ಇದೇ ಮೊದಲ ಬಾರಿಗೆ ಕೇರಳದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಆರು ದಲಿತರು ಸೇರಿದಂತೆ 36 ಬ್ರಾಹ್ಮಣೇತರರನ್ನು ನೇಮಕಮಾಡುವಂತೆ ಕೇರಳ ದೇವಸ್ಥಾನ ನೇಮಕಾತಿ ಮಂಡಳಿ ಶಿಫಾರಸು ಮಾಡಿದೆ.
ಟ್ರವಂಕೊರ್ ದೇವಸ್ಥಾನ ಮಂಡಳಿ(ಟಿಡಿಬಿ) ನಿರ್ವಹಣೆ ಮಾಡುತ್ತಿರುವ ದೇವಸ್ಥಾನಗಳಲ್ಲಿ ಇದೇ ಮೊದಲ ಬಾರಿಗೆ ಆರು ದಲಿತರನ್ನು ಅರ್ಚಕರಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿರುವುದಾಗಿ ಕೇರಳ ದೇವಸ್ಥಾನ ನೇಮಕಾತಿ ಮಂಡಳಿ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಲೋಕ ಸೇವಾ ಆಯೋಗ(ಪಿಎಸ್ ಸಿ) ಅರೆಕಾಲಿಕ ಅರ್ಚಕ ಹುದ್ದೆಗಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿದ್ದು, ಇದರ ಆಧಾರದ ಮೇಲೆ ಅರ್ಚಕರನ್ನು ನೇಮಕ ಮಾಡಿರುವುದಾಗಿ ದೇವಸ್ಥಾನ ನೇಮಕಾತಿ ಮಂಡಳಿ ಹೇಳಿದೆ.
ಮೀಸಲಾತಿ ಮತ್ತು ಮೆರಿಟ್ ಆಧಾರದ ಮೇಲೆ ಅರ್ಚಕರನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಭ್ರಷ್ಟಾಚಾರಕ್ಕೆ ಯಾವುದೇ ಅವಕಾಶ ನೀಡಿಲ್ಲ ಎಂದು ದೇವಸ್ಥಾನಂ ಸಚಿವ ಕಡಕಂಪಲ್ಯ ರಾಮಚಂದ್ರನ್ ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

'ಕರ್ನಾಟಕದ ಹಿತಕ್ಕಿಂತ, ಹೈಕಮಾಂಡ್ ಹಂಗೇ ಹೆಚ್ಚಾಯಿತೇ? ಜರ್ಮನಿ ಚಾನ್ಸೆಲರ್ ಸ್ವಾಗತಿಸದ CM, DCM, ವಿರುದ್ಧ ಬಿಜೆಪಿ ಕಿಡಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್‌ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

SCROLL FOR NEXT