ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ 
ದೇಶ

ಇದೇ ಮೊದಲ ಬಾರಿಗೆ ಕೇರಳ ದೇವಸ್ಥಾನಗಳಲ್ಲಿ ಅರ್ಚಕರಾಗಿ ಆರು ದಲಿತರ ನೇಮಕಕ್ಕೆ ಶಿಫಾರಸು

ಇದೇ ಮೊದಲ ಬಾರಿಗೆ ಕೇರಳದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಆರು ದಲಿತರು ಸೇರಿದಂತೆ 36 ಬ್ರಾಹ್ಮಣೇತರರನ್ನು ...

ತಿರುವನಂತಪುರಂ: ಇದೇ ಮೊದಲ ಬಾರಿಗೆ ಕೇರಳದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಆರು ದಲಿತರು ಸೇರಿದಂತೆ 36 ಬ್ರಾಹ್ಮಣೇತರರನ್ನು ನೇಮಕಮಾಡುವಂತೆ ಕೇರಳ ದೇವಸ್ಥಾನ ನೇಮಕಾತಿ ಮಂಡಳಿ ಶಿಫಾರಸು ಮಾಡಿದೆ.
ಟ್ರವಂಕೊರ್ ದೇವಸ್ಥಾನ ಮಂಡಳಿ(ಟಿಡಿಬಿ) ನಿರ್ವಹಣೆ ಮಾಡುತ್ತಿರುವ ದೇವಸ್ಥಾನಗಳಲ್ಲಿ ಇದೇ ಮೊದಲ ಬಾರಿಗೆ ಆರು ದಲಿತರನ್ನು ಅರ್ಚಕರಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿರುವುದಾಗಿ ಕೇರಳ ದೇವಸ್ಥಾನ ನೇಮಕಾತಿ ಮಂಡಳಿ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಲೋಕ ಸೇವಾ ಆಯೋಗ(ಪಿಎಸ್ ಸಿ) ಅರೆಕಾಲಿಕ ಅರ್ಚಕ ಹುದ್ದೆಗಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿದ್ದು, ಇದರ ಆಧಾರದ ಮೇಲೆ ಅರ್ಚಕರನ್ನು ನೇಮಕ ಮಾಡಿರುವುದಾಗಿ ದೇವಸ್ಥಾನ ನೇಮಕಾತಿ ಮಂಡಳಿ ಹೇಳಿದೆ.
ಮೀಸಲಾತಿ ಮತ್ತು ಮೆರಿಟ್ ಆಧಾರದ ಮೇಲೆ ಅರ್ಚಕರನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಭ್ರಷ್ಟಾಚಾರಕ್ಕೆ ಯಾವುದೇ ಅವಕಾಶ ನೀಡಿಲ್ಲ ಎಂದು ದೇವಸ್ಥಾನಂ ಸಚಿವ ಕಡಕಂಪಲ್ಯ ರಾಮಚಂದ್ರನ್ ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT