ಪಂಚಕುಲದಲ್ಲಿ ನಡೆದ ಹಿಂಸಾಚಾರದ ವೇಳೆ ಕಾಣಿಸಿಕೊಂಡ ಹೊಗೆ 
ದೇಶ

ಪಂಚಕುಲ ಹಿಂಸಾಚಾರ: ಡೇರಾ ಸಚ್ಚಾ ಸೌದಾದ 45 ಸದಸ್ಯರಿಗೆ ಸಮನ್ಸ್

ಆಗಸ್ಟ್ 25ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ....

ಚಂಡೀಗಢ: ಆಗಸ್ಟ್ 25ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ ಬಳಿಕ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಡೇರಾದ 45 ಸದಸ್ಯರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದ್ದಾರೆ.
ಡೇರಾ ಸಚ್ಚಾ ಸೌದ ಆಶ್ರಮದ ಸಮಿತಿ ಅಧ್ಯಕ್ಷ ವಿಪಾಸನ ಮತ್ತು ಉಪಾಧ್ಯಕ್ಷ ಪಿ.ಆರ್.ನೈನ್ ಹಾಗೂ 45 ಸದಸ್ಯರನ್ನು ಪಂಚಕುಲ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದ್ದು, 
ಎಲ್ಲಾ ಆರೋಪಿಗಳಿಗೂ ವಿಚಾರಣೆಗೆ ಹಾಜರಾಗುವಂತೆ ಇಂದು ಹರಿಯಾಣ ಪೊಲೀಸರು ಸಮನ್ಸ್ ನೀಡಿದ್ದಾರೆ.
ಈ ಮಧ್ಯೆ, ಡೇರಾದ 700 ಕೋಟಿ ರುಪಾಯಿ ವರ್ಗಾವಣೆ ಮತ್ತು ಹವಾಲ ಡೀಲ್ ಗೆ ಸಂಬಂಧಿಸಿದ ಮಾಹಿತಿ ಇರುವ ಹಾರ್ಡ್ ಡಿಸ್ಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದು, ಅದನ್ನು ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಗಸ್ಟ್ 25ರಂದು ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಂ ಸಿಂಗ್ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದ ಬಳಿಕ ಪಂಚಕುಲದಲ್ಲಿ ನಡೆದ ಭಾರಿ ಹಿಂಸಾಚಾರದಲ್ಲಿ 38 ಮಂದಿ ಮೃತಪಟ್ಟಿದ್ದರು ಮತ್ತು 264 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ