ಭಾರತೀಯ ವಾಯುಪಡೆ ಕಡಲ್ಗಳ್ಳರನ್ನು ತಡೆಯುತ್ತಿರುವ ದೃಶ್ಯ. 
ದೇಶ

ಗಲ್ಫ್ ಆಫ್ ಏಡೆನ್: ಕಡಲ್ಗಳ್ಳರಿಂದ ಹಡಗು ರಕ್ಷಿಸಿದ ಭಾರತೀಯ ನೌಕಾಪಡೆ

ಗಲ್ಫ್ ಆಫ್ ಏಡೆನ್ ನಲ್ಲಿ ಕಡಲ್ಗಳ್ಳರು ಭಾರತೀಯ ಹಡಗಿನ ಮೇಲೆ ದಾಳಿ ನಡೆಸಲು ಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತ ಭಾರತೀಯ ನೌಕಾಪಡೆ ಕಡಲ್ಗಳ್ಳರಿಂದ ಹಡಗನ್ನು ರಕ್ಷಿಸಿದೆ.

ನವದೆಹಲಿ: ಗಲ್ಫ್ ಆಫ್ ಏಡೆನ್ ನಲ್ಲಿ ಕಡಲ್ಗಳ್ಳರು ಭಾರತೀಯ ಹಡಗಿನ ಮೇಲೆ ದಾಳಿ ನಡೆಸಲು ಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತ ಭಾರತೀಯ ನೌಕಾಪಡೆ ಕಡಲ್ಗಳ್ಳರಿಂದ ಹಡಗನ್ನು ರಕ್ಷಿಸಿದೆ. 
ತ್ರಿಶೂಲ್ ನೌಕಾ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದ್ದು, ಭಾರತೀಯ ಧ್ವಜವನ್ನು ಹೊಂದಿದ್ದ ಹಡಗನ್ನು ರಕ್ಷಿಸಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ. ನೌಕಾಪಡೆಯ ಮಾಹಿತಿ ಪ್ರಕಾರ ನೌಕಾಪಡೆಯ ವಿಶೇಷ ತಂಡ 12 ಜನರನ್ನು ವಶಕ್ಕೆ ಪಡೆದಿದೆ.
ಇಂದು ಮಧ್ಯಾಹ್ನ 12.30ರ ಸುಮಾರಿಗೆ ಕಡಲ್ಗಳ್ಳರು ಎಂವಿ ಜಾಗ್ ಅಮರ್ ಭಾರತೀಯ ಹಡಗಿನ ಮೇಲೆ ದಾಳಿ ನಡೆಸಲು ಮುಂದಾದಾಗ ಐಎನ್ಎಸ್ ತ್ರಿಶೂಲ್ ನಲ್ಲಿದ್ದ ನೌಕಾಪಡೆ ಸಿಬ್ಬಂದಿ ಕಡಲ್ಗಳ್ಳರನ್ನು ಹಿಮ್ಮೆಟ್ಟಿಸಿದರು ಎಂದು ನೌಕಾದಳ ವಕ್ತಾರ ಕ್ಯಾಪ್ಟನ್ ಡಿಕೆ ಶರ್ಮಾ ಅವರು ಟ್ವೀಟ್ ಮಾಡಿದ್ದಾರೆ. 
ಈ ಹಿಂದೆ ಮೇ ನಲ್ಲಿ ಇದೇ ರೀತಿ ಕಡಲ್ಗಳ್ಳರು ಲಿಬೇರಿಯನ್ ವ್ಯಾಪಾರಿ ಹಡಗು ಲಾರ್ಡ್ ಮೌಂಟ್ಬ್ಯಾಟನ್ ಮೇಲೆ ದಾಳಿಗೆ ಮುಂದಾದಾಗ ಎಚ್ಚೆತ್ತ ಐಎನ್ಎಸ್ ಶರ್ದಾ ಕಡಲ್ಗಳ್ಳರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT