ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರಿಗೆ ಶುಕ್ರವಾರ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಅನಾರೋಗ್ಯಪೀಡಿತ ಅವರ ಪತಿಯನ್ನು ಭೇಟಿ ಮಾಡುವುದಕ್ಕಾಗಿ ಐದು ದಿನಗಳ ಕಾಲ ಪೆರೋಲ್ ನೀಡಿದ್ದಾರೆ. ಆದರೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ ಜಯಲಲಿತಾ ಅವರ ಆಪ್ತೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.
ಶಶಿಕಲಾ ಕೈದಿ ನಂ.9234 ಅಕ್ಟೋಬರ್ 7ರಿಂದ 11ರ ವರೆಗೆ ಪೆರೋಲ್ ನೀಡಲಾಗಿದ್ದು, ಈ ಐದು ದಿನಗಳ ಅವಧಿಯಲ್ಲಿ ಪತಿಯ ಭೇಟಿಯನ್ನು ಹೊರತುಪಡಿಸಿ ಬೇರೆ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಿರುವಂತೆ ಸೂಚಿಸಲಾಗಿದೆ.
ಮನೆಯಲ್ಲಿ ಮತ್ತು ಆಸ್ಪತ್ರೆಯಲ್ಲಿ ಬೇರೆ ಯಾರನ್ನೂ ಭೇಟಿ ಮಾಡದಂತೆ ಹಾಗೂ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳದಂತೆ ಷರತ್ತು ವಿಧಿಸಲಾಗಿದೆ.
ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡದಂತೆಯೂ ಎಐಎಡಿಎಂಕೆ ನಾಯಕಿಗೆ ಸೂಚಿಸಲಾಗಿದ್ದು, ಚೆನ್ನೈ ಪೊಲೀಸರು ಶಶಿಕಲಾ ಅವರ ಮೇಲೆ ನಿಗಾವಹಿಸಲಿದ್ದಾರೆ.
ಶಶಿಕಲಾ ಅವರು ಶುಕ್ರವಾರ ಸಂಜೆ ಚೆನ್ನೈಗೆ ತೆರಳಿ ತಮ್ಮ ಪತಿಯನ್ನು ಭೇಟಿ ಮಾಡಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟರಾಜನ್ ಕಿಡ್ನಿ ಹಾಗೂ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos