ಮಹಾತ್ಮ ಗಾಂಧಿ, 
ದೇಶ

ಗಾಂಧಿ ಹತ್ಯೆ: ಮರು ತನಿಖೆ ಮನವಿ ವಿಚಾರಣೆಗೆ ಮುನ್ನುಡಿ ಬರೆದ ಸುಪ್ರೀಂ ಕೋರ್ಟ್

ಮಹಾತ್ಮಾ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ತನಿಖೆಯನ್ನು ಪುನರ್ ಪ್ರಾರಂಭಿಸುವಂತೆ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ಕೆಲವು ಮಹತ್ವದ ಪ್ರಶ್ನೆಗಳನ್ನು ಎತ್ತಿದೆ.

ನವದೆಹಲಿ: ಮಹಾತ್ಮಾ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ತನಿಖೆಯನ್ನು ಪುನರ್ ಪ್ರಾರಂಭಿಸುವಂತೆ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ಕೆಲವು ಮಹತ್ವದ ಪ್ರಶ್ನೆಗಳನ್ನು ಎತ್ತಿದೆ.
ಸಂಕ್ಷಿಪ್ತ ವಿಚಾರಣೆಯ ನಂತರ ನ್ಯಾಯಮೂರ್ತಿ ಎಸ್ ಎಸ್ ಬೊಬ್ಬೆ ಮತ್ತು ಎಲ್ ನಾಗೇಶ್ವರ ರಾವ್ ಒಳಗೊಂಡ ಪೀಠವು ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮ್ರೆಂದರ್ ಶರಣ್ ಅವರನ್ನು ನ್ಯಾಯಾಲಯಕ್ಕೆ ಸಹಾಯ ಮಾಡಲು ಅಮಿಕಸ್ ಕ್ಯೂರಿ   ಆಗಿ ನೇಮಿಸಿಕೊಂಡಿದೆ.
15 ನಿಮಿಷಗಳ ಕಾಲ ನಡೆದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ಈ ಹಿಂದೆ ನಡೆಸಿದ್ದ ವಿಚಾರಣೆಯಲ್ಲಿ 'ಯಾವುದೇ ತೀರ್ಮಾನಕ್ಕೆ ಬಂದಿಲ್ಲ' ಎಂಡು ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಶರ್ಮಾ, ಇದರ ಕುರಿತಂತೆ ಸದ್ಯಕ್ಕೆ ಯಾವ ತೀರ್ಮಾನ ಕೈಗೊಳ್ಳ ಬರುವುದಿಲ್ಲ. ಮುಂದಿನ ವಿಚಾರಣೆಯನ್ನು ಅ.30ಕ್ಕೆ ನಡೆಸಲಾಗುತ್ತದೆ ಎಂದರು.
 ಸಂಶೋಧನಾ ಮತ್ತು ಅಭಿನವ ಭಾರತ ಟ್ರಸ್ಟಿ ಆಗಿರುವ ಮುಂಬಯಿ ಮೂಲದ ಡಾ. ಪಂಕಜ್ ಫಾಡ್ನಿಸ್  ಸಲ್ಲಿಸಿದ ಅರ್ಜಿ ಇದಾಗಿದ್ದು ಹಲವಾರು ದಾಕಲೆಗಳೊದನೆ ಬಾಪೂ ಹತ್ಯೆಯ ತನಿಖೆಯನ್ನು ಮರುಪರಿಶೀಲಿಸುವಂತೆ ಅರ್ಜಿದಾರರು ಕೋರಿದ್ದಾರೆ.  ಭಾರತ ಇತಿಹಾಸದಲ್ಲಿ ಇದು ಅತ್ಯಂತ ದೊಡ್ಡ ತಿರುವು ಆಗಲಿದೆ  ಎನ್ನಲಾಗಿದೆ
ಹಿಂದೂ ರಾಷ್ಟ್ರೀಯತೆಯ ಬಲಪಂಥೀಯ ನಾಥೂರಾಮ್ ವಿನಯಕ್ ಗೋಡ್ಸೆ ಇಂದ ಜನವರಿ 30, 1948 ರಂದು ಗಾಂಧಿ ಗುಂಡೇಟಿಗೆ ಬಲಿಯಾಗಿದ್ದರು..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT