ಸಾಂದರ್ಭಿಕ ಚಿತ್ರ 
ದೇಶ

ಗಲ್ಲು ಶಿಕ್ಷೆಗೆ ನೇಣು ಬದಲು ಬೇರೆ ವಿಧಾನ ಅಳವಡಿಸಬಹುದೇ? ಕೇಂದ್ರಕ್ಕೆ ಸುಪ್ರೀಂ

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಿಗೆ ನೇಣು ಹಾಕುವ ಬದಲು ಬೇರೆ ಯಾವುದಾದರೂ ವಿಧಾನವನ್ನು ...

ನವದೆಹಲಿ: ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಿಗೆ ನೇಣು ಹಾಕುವ ಬದಲು ಬೇರೆ ಯಾವುದಾದರೂ ವಿಧಾನವನ್ನು ಅಳವಡಿಸಬಹುದೇ ಎಂಬ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಈ ಕುರಿತು ಮೂರು ವಾರಗಳೊಳಗೆ ಉತ್ತರಿಸುವಂತೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಹೇಳಿದೆ.
ಮರಣದಂಡನೆ ಶಿಕ್ಷೆ ವಿಧಿಸುವ ವಿಧಾನದ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನಮ್ಮ ಸಂವಿಧಾನ ಹಾನುಭೂತಿಯುಳ್ಳದ್ದಾಗಿದ್ದು, ಅದು ಜೀವನದ ಪವಿತ್ರತೆಯ ತತ್ವವನ್ನು ಗುರುತಿಸುತ್ತದೆ. ಆಧುನಿಕ ಕಾಲದಲ್ಲಿ ಹಲವು ವಿಧಾನಗಳನ್ನು ಕಂಡುಹಿಡಿದಿರುವಾಗ, ತಂತ್ರಜ್ಞಾನ ಇಷ್ಟೊಂದು ಮುಂದುವರಿದಿರುವಾಗ ಗಲ್ಲು ಶಿಕ್ಷೆಗೆ ಗುರಿಯಾಗಿರುವವರಿಗೆ ಬೇರೆ ವಿಧಾನಗಳ ಮೂಲಕ ಶಿಕ್ಷೆ ನೀಡಲು ಶಾಸನ ರೂಪಿಸುವ ಕುರಿತು ಸರ್ಕಾರ ಯೋಚಿಸಬಹುದು ಎಂದು ಹೇಳಿದೆ.
ಸಂವಿಧಾನದ 21ನೇ ಪರಿಚ್ಛೇದ ಜೀವಿಸುವ ಹಕ್ಕನ್ನು ಮನುಷ್ಯನಿಗೆ ಒದಗಿಸಿರುವುದಲ್ಲದೆ ಮರಣದಂಡನೆಗೆ ಗುರಿಯಾದ ಖೈದಿಗಳಿಗೆ ಕಡಿಮೆ ನೋವುಂಟುಮಾಡುವ ಸಾವನ್ನು ನೀಡಬೇಕು ಎಂದು ಕೂಡ ಹೇಳುತ್ತದೆ. 
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎಎಮ್ ಖನ್ವಿಲ್ಕರ್ ಮತ್ತು ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿ ಮೂರು ವಾರಗಳೊಳಗೆ ಉತ್ತರಿಸುವಂತೆ ಸೂಚಿಸಿದೆ. ನ್ಯಾಯಮೂರ್ತಿಗಳು ಕಾನೂನು ಆಯೋಗದ 187ನೇ ವರದಿಯನ್ನು ಉಲ್ಲೇಖಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಡಾಖ್ ಹಿಂಸಾಚಾರಕ್ಕೆ ನಾಲ್ವರು ಬಲಿ: 30 ಜನರಿಗೆ ಗಾಯ; ಬಿಜೆಪಿ ಕಚೇರಿ, ಪೊಲೀಸ್ ವ್ಯಾನ್ ಗೆ ಬೆಂಕಿ; Video

ನನ್ನ ರಾಷ್ಟ್ರ ನಿರ್ಮಾಣದ ಆಶಯಗಳಿಗೆ ಎಸ್ಎಲ್ ಭೈರಪ್ಪನವರೇ ಪ್ರೇರಣೆ: BJP ಸಂಸದ ತೇಜಸ್ವೀ ಸೂರ್ಯ

Asia Cup 2025: ಬಾಂಗ್ಲಾದೇಶ ವಿರುದ್ಧ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ Team India!

ಜಾತಿ ಗಣತಿಗೆ ತಡೆ ಕೋರಿ ಅರ್ಜಿ; ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

SL Bhyrappa ನಿಧನ: ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಇಲ್ಲಿದೆ ಮಾಹಿತಿ

SCROLL FOR NEXT