ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಸರಯೂ ನದಿಯಲ್ಲಿ ದೋಣಿ ಮುಳುಗಿ ಆರು ಸಾವು

ಉತ್ತರ ಪ್ರದೇಶದ ಸರಯೂ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ನಾಲ್ವರು ಮಕ್ಕಳು ಸೇರಿ ಆರು ಜನ ಮೃಅತಪಟ್ಟಿದ್ದಾರೆ.

ಬಹರಾಯಿಚ್: ಉತ್ತರ ಪ್ರದೇಶದ ಸರಯೂ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ನಾಲ್ವರು ಮಕ್ಕಳು ಸೇರಿ ಆರು ಜನ ಮೃಅತಪಟ್ಟಿದ್ದಾರೆ.
ಬಹರಾಯಿಚ್ ಜಿಲ್ಲೆಯ ಬೆಹ್ತಾದಲ್ಲಿ ಸರಯೂ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು ಹತ್ತಿರದ ರಾಮ್​ಗಾಂವ್​​ಗೆ ಜಾತ್ರೆಗೆಂದು ತೆರಳಿದ್ದವರು ಹಿಂತಿರುಗುವ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಒಂಭತ್ತು ಮಂದಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಅದರಲ್ಲಿ ಮೂವರು ಈಜಿ ದಡ ಸೇರಿದ್ದಾರೆ.
ಮೃಅತಪಟ್ಟವರನ್ನು ರಾಜೇಶ್​(25),ಬ್ರಿಜೇಶ್(20),ಮಗನ್​(17),ವಿಜಯ್​(16),ತಿರಿತ್​(12) ಹಾಗೂ ಶಕಿಲ್​(12) ಎಂದು ಗುರುತಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. 
ಕಳೆದ 1 ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಸಂಭವಿಸಿದ ಎರಡನೇ ದೋಣಿ ದುರಂತ ಇದಾಗಿದೆ. ಸೆ.14 ರಂದು ಯಮುನಾ ನದಿಯಲ್ಲಿ ದೋಣಿ ಮುಳುಗಿ 22 ಮಂದಿ ನೀರು ಪಾಲಾಗಿದ್ದರು. 
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.ಸಂತ್ರಸ್ತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT