ದೇಶ

ಕರ್ನೂಲು: ಸಿನಿಮೀಯ ರೀತಿಯಲ್ಲಿ ಎಪಿಎಸ್ಆರ್ ಟಿಸಿ ಬಸ್ ಕಳ್ಳತನ

ಸಿನಿಮೀಯ ರೀತಿಯಲ್ಲಿ ಎಪಿಎಸ್ಆರ್ ಟಿಸಿ ಬಸ್ ಕಳ್ಳತನ ನಡೆದಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ನಂದಿಕೊಟ್ಕೂರು ಡಿಪೋದಲ್ಲಿ ನಡೆದಿದೆ.

ಕರ್ನೂಲು: ಸಿನಿಮೀಯ ರೀತಿಯಲ್ಲಿ ಎಪಿಎಸ್ಆರ್ ಟಿಸಿ ಬಸ್ ಕಳ್ಳತನ ನಡೆದಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ನಂದಿಕೊಟ್ಕೂರು ಡಿಪೋದಲ್ಲಿ ನಡೆದಿದೆ. 
ಬಸ್ ಚಾಲಕ ರಾತ್ರಿ ಸುಮಾರು 11:30 ರ ವೇಳೆಗೆ ಬನ್ನು ಡಿಪೋದಲ್ಲಿ ತಂದು ನಿಲ್ಲಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಬಸ್ ನಿಲ್ಲಿಸಿದ್ದ ಜಾಗದಿಂದ ಕಣ್ಮರೆಯಾಗಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ನಂದಿಕೊಟ್ಕೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಕೊನೆಗೂ ಜುಪಾಡು ಬಂಗ್ಲೋ ಮಾರ್ಗದಲ್ಲಿ ಬಸ್ ಪತ್ತೆಯಾಗಿದೆ. ಮುಖ್ಯ ಪೊಲೀಸ್ ಪೇದೆ ಕೆ.ವೆಂಕಟರಮಣ ಹಾಗೂ ಇನ್ನಿತರ ಪೇದೆಗಳು ಬಸ್ ನ್ನು ಬೆನ್ನಟ್ಟಿದ್ದಾರೆ. ಸಿಕ್ಕಿಬಿದ್ದ ಬಸ್ ಕಳ್ಳ ಶ್ರೀನಿವಾಸ್ (30) ಪೊಲೀಸ್ ಪೇದೆಗಳ ಬೈಕ್ ಮೇಲೆ ಬಸ್ ನ್ನು ಚಲಾಯಿಸಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೇ ಬಸ್ ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಕಳ್ಳನ ಯತ್ನ ವಿಫಲವಾಗಿದ್ದು ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. 
ಬಸ್ ಕಳ್ಳನನ್ನು ಪೊಲೀಸರು ಬಂಧಿಸಿದ್ದು, ಪೊಲೀಸ್ ಪೇದೆಗಳಿಗೆ ಗಾಯಗಳುಂಟಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT