ದೀಪ್ ಕುಮಾರ್ ಉಪಾಧ್ಯಾಯ 
ದೇಶ

ಭಾರತದಲ್ಲಿನ ನೇಪಾಳ ರಾಯಭಾರಿ ದೀಪ್ ಕುಮಾರ್ ರಾಜೀನಾಮೆ

ಭಾರತದಲ್ಲಿನ ನೇಪಾಳದ ರಾಯಭಾರಿ ದೀಪ್ ಕುಮಾರ್ ಉಪಾಧ್ಯಾಯ ರಾಜೀನಾಮೆ ನೀಡಿದ್ದಾರೆ.

ಕಠ್ಮಂಡು: ಭಾರತದಲ್ಲಿನ ನೇಪಾಳದ ರಾಯಭಾರಿ ದೀಪ್ ಕುಮಾರ್ ಉಪಾಧ್ಯಾಯ ರಾಜೀನಾಮೆ ನೀಡಿದ್ದಾರೆ. ಅವರು ಮುಂದಿನ ತಿಂಗಳು ನೇಪಾಳದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ನೇಪಾಳದ ವಿದೇಶಾಂಗ ಸಚಿವ ಕೃಷ್ಣ ಬಹದ್ದೂರ್ ಮಹಾರ ರಿಗೆ ಉಪಾದ್ಯಾಯ ತನ್ನ ರಾಜೀನಾಮೆ ಪತ್ರವನ್ನು ನೀಡಿದ್ದು ತಾನು ಸಾಮಾನ್ಯ ಜೀವನಕ್ಕೆ ಹಿಂದಿರುಗಲು ಬಯಸಿದ್ದೇನೆ ಎಂದು ತಿಳಿಸಿದರು. ಜತೆಗೆ ಕಪಿಲವಸ್ತು ವಿನಿಂದ ನೇಪಾಳಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಚಿಸುತ್ತಿರುವುದಾಗಿ ಹೇಳಿದರು..
ಉಪಾದ್ಯಾಯ ಭಾರತ ರಾಯಭಾರಿಯಾಗಿ ಅಧಿಕಾರ ವಹಿಸಿಕೊಂಡ ಹನ್ನೊಂದು ತಿಂಗಳ ತರುವಾಯ ರಾಜೀನಾಮೆ ಪತ್ರ ಸಲ್ಲಿಸಿದ್ದು ನೇಪಾಳ ಸರ್ಕಾರ ಅವರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಲಿಲ್ಲ. ಸರ್ಕಾರ ರಾಜೀನಾಮೆಯನ್ನು ಅಂಗೀಕರಿಸಿದ ತಕ್ಷಣಕ್ಕೆ ತಾನು ಚುನಾವಣಾ ಅಭ್ಯರ್ಥಿ ಎಂದು ಘೋಷಿಸಿಕೊಳ್ಳಲು ಅವರು ಯೋಜಿಸಿದ್ದಾರೆ ಎನ್ನಲಾಗಿದೆ.
ನೇಪಾಳಿ ಕಾಂಗ್ರೆಸ್ ನ ಸಚಿವ ಮತ್ತು ಕೇಂದ್ರ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ ಉಪಾಧ್ಯಾಯ ಅವರನ್ನು 2015 ರಲ್ಲಿ ಮೊದಲ ಬಾರಿಗೆ ರಾಯಭಾರಿಯಾಗಿ ನೇಮಿಸಲಾಯಿತು ಮತ್ತು 2016 ರಲ್ಲಿ ಕೆ.ಪಿ. ಶರ್ಮಾ ಒಲಿ ನೇತೃತ್ವದ ಸರ್ಕಾರ ಮತ್ತೆ ಅವರನ್ನು ಹಿಂದಕ್ಕೆ ಕರೆಸಿಕೊಂಡಿತ್ತು.
ಆ ಸಮಯದಲ್ಲಿ ಕೆ.ಪಿ. ಶರ್ಮಾ ಒಲಿ ಸರ್ಕಾರವು ಉಪಾದ್ಯಾಯ,  ಸರ್ಕಾರವನ್ನು ಉರುಳಿಸಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ದೂಷಿಸಿತ್ತು. ಆದರೆ ಪುಷ್ಪಾ ಕಮಲ್ ದಹಲ್'ಪ್ರಚಂಡ'-ನೇತೃತ್ವದ ಸರ್ಕಾರ ಅವರನ್ನು ಪುನಃ ಭಾರತದಲ್ಲಿ ರಾಯಭಾರಿಯಾಗಿ ನೇಮಕ ಮಾಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: ಕನಿಷ್ಠ 20 ಮಂದಿ ಸಾವು-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ: ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಕುದಿಯುತ್ತಿದ್ದಾರಾ ಖರ್ಗೆ?

ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್‌ ಸೇರಿ ಬೆಂಗಳೂರಿನ ಹೊರ ವಲಯದ ಮತ್ತಷ್ಟು ಪ್ರದೇಶಗಳು GBA ವ್ಯಾಪ್ತಿಗೆ; DCM ಡಿ.ಕೆ ಶಿವಕುಮಾರ್

ನವೆಂಬರ್ 2 ರಂದು ಚಿತ್ತಾಪುರದಲ್ಲಿ ಪಥಸಂಚಲನ: ಜಿಲ್ಲಾಡಳಿತ ಅನುಮತಿ ಕೋರಿದ RSS

SCROLL FOR NEXT